9:01 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು