1:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು