10:53 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ತುಳು ನೆಲದ ಝಳಕ್ ತೋರಿಸುವ ‘ಕೊರಮ್ಮ’: ಹಳೆ ತಲೆಮಾರಿನ ಬದುಕಿನ‌ ಕಥಾ ಹಂದರ

13/08/2023, 21:38

ಮಂಗಳೂರು(reporterkarnataka.com): ‘ಕೊರಮ್ಮ …ಎ ಹ್ಯೂಮನ್’ ಎನ್ನುವ ಟೈಟಲ್‌ನೊಂದಿಗೆ ಆರಂಭವಾಗುವ ಸಿನಿಮಾ ಇದು. ತುಳುನಾಡಿನ ಸಂಸ್ಕೃತಿ, ಭಾಷೆ, ಮಾನವೀಯ ಮೌಲ್ಯವನ್ನು ಒಂದು ಫ್ರೇಮ್ ನೊಳಗೆ ಕೊರಮ್ಮದಲ್ಲಿ ಸೆರೆ ಹಿಡಿಯುವ ಪ್ರಯತ್ನ ನಡೆದಿದೆ.
ಕೊರಮ್ಮದಲ್ಲಿ ಹಳೆ ತಲೆಮಾರಿನ ಸುಂದರ ಬದುಕನ್ನು ಅತೀ ಸುಂದರವಾಗಿ ಕಟ್ಟಿಕೊಡಲಾಗಿದೆ. ಇದರಲ್ಲಿ
ಈ ನೆಲದ ಕಥೆ ನೇತ್ರಾವತಿಯಂತೆ, ಕುಮಾರಧಾರೆಯಂತೆ,‌ ಫಲ್ಗುಣಿಯಂತೆ ಸರಾಗವಾಗಿ ಹರಿದು ಬರುತ್ತದೆ. ಮಾನವೀಯ ಮೌಲ್ಯ, ಸಂಬಂಧ, ಬಂಧುತ್ವವನ್ನು ಕಲಿಸಿಕೊಡುತ್ತದೆ. ತುಳುನಾಡಿನ ಜನರ ವಾಸ್ತವ ಜೀವನಕ್ಕೂ ಸಿನಿಮಾಕ್ಕೂ ತುಂಬಾ ನೆಂಟಸ್ತಿಕೆ ಕಂಡು ಬರುತ್ತದೆ.


ಜಾತಿ -ಧರ್ಮದ ಮೇಲಾಟದಲ್ಲಿ ಯುವಜನತೆ ಸಂಬಂಧಗಳನ್ನು ಕಡಿದು ಹೋಗಬಾರದು, ಕೊಂಡಿಯಂತೆ ಬೆಸೆದುಕೊಂಡು ಮುಂದೆ ಸಾಗಬೇಕು ಎಂಬ ಸಂದೇಶವನ್ನು ನಿರ್ದೇಶಕ ಶಿವಧ್ವಜ್ ಪ್ರೇಕ್ಷಕರಿಗೆ ನೀಡುವಲ್ಲಿ ಯಶಸ್ವಿಯಾದಂತೆ ಕಾಣುತ್ತದೆ.
ಚಿತ್ರವನ್ನು ವೀಕ್ಷಿಸುವಾಗ ನಮ್ಮದೇ ಹಳ್ಳಿಯ ನಮ್ಮ ಮನೆಯಲ್ಲಿ ಕೂತಿರುವ ಭಾವನೆಯನ್ನು ಹೆಚ್ಚಿನ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಸಾಂಪ್ರದಾಯಿಕ ಪರಿಕರಗಳನ್ನು ಬಳಸಲಾಗಿದೆ.
ಶುದ್ಧ ತುಳು ಭಾಷೆಯ ಪ್ರಯೋಗವಾಗಿದೆ. ಜಂಜಾಟದ ಬದುಕಿನ ಧಾವಂತದಲ್ಲಿ ನಾವೇನೋ ಕಳೆದುಕೊಳ್ಳುತ್ತಿದ್ದೇವೆ, ಹಾಗಾಗಬಾರದು ಎನ್ನುವುದನ್ನು ಸಿನಿಮಾ ಸಾರಿ ಸಾರಿ ಹೇಳುತ್ತದೆ.
ಪಾತ್ರಗಳ ನೂಕು ನುಗ್ಗಲು ಇಲ್ಲದ ಕೂರಮ್ಮದಲ್ಲಿ
ಸುರೇಶ್ ಬೈರಸಂದ್ರ ಅವರ
ಅದ್ಭುತ ಛಾಯಾಗ್ರಹಣವಿದೆ. ಒಳೆಯ ಸಂಗೀತವಿದೆ.
……………..

ಇತ್ತೀಚಿನ ಸುದ್ದಿ

ಜಾಹೀರಾತು