11:46 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

25/06/2024, 12:09

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದೂ, ದೈವ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ” ಎಂದು ಹೇಳಿ ನಂತರ “ಮಾತೆರೆಗ್ಲಾ ಸೊಲ್ಮೆಲು” ಎಂದು ಸಂಸತ್ತನ್ನು ಅಭಿನಂದಿಸಿದರು.
ತುಳುನಾಡಿಗೆ, ತುಳುಭಾಷೆಗೆ ಅವರು ಸಲ್ಲಿಸಿದ ಈ ಗೌರವ ಸಾಮಾಜಿಕ ಜಾಲತಾಣದಲ್ಲಿಯೂ ಸುದ್ದಿ ಮಾಡಿದೆ ಹಾಗೂ ಮೆಚ್ಚುಗೆ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು