2:50 PM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024: ಸಿಎಂ ಸಿದ್ದರಾಮಯ್ಯ ಲಾಂಛನ ಅನಾವರಣ

14/11/2024, 19:47

ಬೆಂಗಳೂರು(reporterkarnataka.com): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಸಂಘ ಮತ್ತು ಜಿಲ್ಲಾಡಳಿತ ತುಮಕೂರು ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮ ನೆನಪಿನ ರಾಜ್ಯಮಟ್ಟದ ಕ್ರೀಡಾಕೂಟದ
ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿಯಲ್ಲಿ ಅನಾವರಣಗೊಳಿಸಿದರು.
ತುಮಕೂರಿನಲ್ಲಿ ಡಿಸೆಂಬರ್ ನಲ್ಲಿ ಆಯೋಜಿಸಲಿರುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಅಗತ್ಯ ಪೂರ್ವ ಸಿದ್ಧತೆಯನ್ನು ನಡೆಸುತ್ತಿದ್ದು ಉದ್ಘಾಟಿಸಲು ಸಮಯವಕಾಶ ಕೊಡಬೇಕೆಂದು ಮುಖ್ಯಮಂತ್ರಿಗಳನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.
ಡಿಸೆಂಬರ್ ನಲ್ಲಿ ಸಮ್ಮೇಳನ ಮಾಡಿದರೆ ಅಧಿವೇಶನ ಇರುವುದರಿಂದ ಬರುವುದು ಕಷ್ಟವಾಗಬಹುದು. ಜನವರಿಯಲ್ಲಿ ಮಾಡಿದರೆ ಖಂಡಿತವಾಗಿ ಬರುತ್ತೇನೆ. ಅಗತ್ಯ ಸಹಕಾರವನ್ನು ಕೊಡಲು ತಿಳಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಮತ್ತೊಮ್ಮೆ ಶುಭ ಹಾರೈಸಿದರು.
ಸಂಘದ ಜಿಲ್ಲಾಧ್ಯಕ್ಷ ಚಿ. ನಿ. ಪುರುಷೋತ್ತಮ್ ಹಾಗೂ ರಾಷ್ಟ್ರೀಯ ಮಂಡಳಿ ಸದಸ್ಯರಾದ ಅನು ಶಾಂತರಾಜು, ಟಿ.ಎನ್. ಮಧುಕರ್ , ಡಿ.ಎಂ.ಸತೀಶ್ ಮತ್ತು ಪದಾಧಿಕಾರಿಗಳು ನಿಯೋಗದಲ್ಲಿದ್ದರು.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರನ್ನು ಕ್ರೀಡಾಕೂಟಕ್ಕೆ ಆಹ್ವಾನಿಸಲಾಯಿತು.ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಹಿಮಂತರಾಜು, ಕ್ರೀಡಾ ಸಮಿತಿ ಮುಖ್ಯ ಸಂಚಾಲಕರಾದ ಸತೀಶ್ ಹಾರೋಗೆರೆ, ಯಶಸ್ ಪದ್ಮನಾಭ್, ಎಸ್. ಹರೀಶ್ ಆಚಾರ್ಯ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು