4:17 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು: ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನೆ

03/10/2025, 20:59

ಬಂಟ್ವಾಳ(reporterkarnataka.com): ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್ ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯಅತಿಥಿ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ಮಾಜಿ ನಿರ್ದೇಶಕ ರೆ|ಫಾ| ರಿಚ್ಚಾರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ದೇವರು ಕೊಟ್ಟ ಅವಕಾಶವಾಗಿದ್ದು, ದಾದಿಯರ ಕರ್ತವ್ಯ ನಿರ್ವಹಣೆಗೆ ಸಂಬಂಧ ಹಾಗೂ ಸಂವಹನ ಅತಿ ಅಗತ್ಯವಾಗಿದೆ. ರೋಗಿಗಳಿಗೆ ಪ್ರೀತಿಯುತ ಆರೈಕೆಯ ಮಾತುಗಳು ಅವರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣುತ್ತದೆ. ಹೀಗಾಗಿ ದಾದಿಯರು ಯಾವತ್ತೂ ಕೂಡ ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಆಸ್ಪತ್ರೆಗೆ ತಾರದೆ ರೋಗಿಗಳ ಜತೆ ಸದಾ ನಗುವಿನೊಂದಿಗೆ ಸೇವೆ ನೀಡಿದಾಗ ನೀವು ಉತ್ತಮ ದಾದಿಯರಾಗುವುದಕ್ಕೆ ಸಾಧ್ಯವಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಫಾದರ್ ಮುಲ್ಲರ್ ಚಾರಿಟೇಬಲ್ ಇನ್‌ಸ್ಟಿಟ್ಯೂಶನ್ಸ್ ನ ನಿರ್ದೇಶಕ ರೆ|ಫಾ| ಪಾವೋಸ್ತಿನ್ ಲುಕಾಸ್ ಲೋಬೊ ಮಾತನಾಡಿ, ದಾದಿಯ ಕರ್ತವ್ಯ ನಿರ್ವಹಣೆಯ ಸಂದರ್ಭ ಜ್ಞಾನ, ಕೌಶಲ್ಯ ಹಾಗೂ ಮೌಲ್ಯ ಎಂಬ ಮೂರು ಅಂಶಗಳ ಕುರಿತು ಅರಿತುಕೊಳ್ಳುವುದು ಅಗತ್ಯವಾಗಿದ್ದು, ನಿರಂತರ ಕೆಲಸ ಮಾಡಿದಾಗ ನಮ್ಮ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವುದಕ್ಕೆ ಸಾಧ್ಯವಿದೆ. ಪ್ರತಿಯೊಬ್ಬರು ಕೂಡ ತಮ್ಮ ಜವಾಬ್ದಾರಿಯನ್ನು ಅರಿತುಕೊಂಡು ನಮ್ಮ ಕೆಲಸವನ್ನು ಸರಿಯಾದ ಸಮಯಕ್ಕೆ ನಿರ್ವಹಿಸುವ ಜತೆಗೆ ಸಹಾನುಭೂತಿಯನ್ನೂ ಮೈಗೂಡಿಸಿಕೊಳ್ಳಬೇಕಾಗುತ್ತದೆ. ಅಧ್ಯಯನದಿಂದ ತಪ್ಪಿಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದಿಂದ ನೋಡಿದಾಗ ಸಮರ್ಥವಾಗಿ ಕೆಲಸ ನಿರ್ವಹಿಸಬಹುದಾಗಿದೆ. ತುಂಬೆಯ ಈ ನರ್ಸಿಂಗ್ ಕಾಲೇಜು ಫಾ| ರಿಚ್ಚಾರ್ಡ್ ಕುವೆಲ್ಲೊ ಅವರು ನಿರ್ದೇಶಕರಾಗಿದ್ದ ವೇಳೆ ಆರಂಭಗೊಂಡಿದೆ ಎನ್ನವುದು ಹೆಮ್ಮೆಯ ವಿಚಾರ ಎಂದರು.
ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಕಿರಣ್ ಶೆಟ್ಟಿ, ನರ್ಸಿಂಗ್ ಕಾಲೇಜು ಉಪಪ್ರಾಂಶುಪಾಲೆ ಪ್ರೊ| ಜಾನೆಟ್ ಸಿಕ್ವೇರಾ ವೇದಿಕೆಯಲ್ಲಿದ್ದರು. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರೆ|ಫಾ| ಡಾ| ಮೈಕಲ್ ಸಾಂತ್ ಮಯೂರ್ ಉಪಸ್ಥಿತರಿದ್ದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತಾಧಿಕಾರಿ ರೆ|ಫಾ| ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ತುಂಬೆ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಡಾ| ಶಿವಶಂಕರ್ ಎ.ಆರ್. ವಂದಿಸಿದರು. ನಿಶಾ ಸಿಲ್ವಿಯಾ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು