2:12 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ತುಂಬೆ: ಮಲ ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಗರ್ಭವತಿ: ಆರೋಪಿ ಜೈಲುಪಾಲು

18/11/2022, 15:06

ಬಂಟ್ವಾಳ(reporterkarnataka.com): ಮಲ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿಸಿದ ಭಯಾನಕ ಘಟನೆ ಬಂಟ್ವಾಳ ಸಮೀಪದ ತುಂಬೆ ಬಳಿ ನಡೆದಿದ್ದು, ಆರೋಪಿ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾಪಿ ಆರೋಪಿಯನ್ನು ತುಂಬೆ ನಿವಾಸಿಯಾಗಿರುವ ವೆಂಕಟೇಶ ಕಾರಂತ ಎಂದು ಗುರುತಿಸಲಾಗಿದೆ. ಈ ಪಾಪಿ ಮಲ ತಂದೆಯು ಮಗಳ ಮೇಲೆ ಯೇ ಕೆಲವು ತಿಂಗಳಿನಿಂದ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಇದರಿಂದ ಬಾಲಕಿ ಗರ್ಭವತಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ವೆಂಕಟೇಶ ಕಾರಂತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ನಿತ್ಯ ಪೂಜೆ, ಹೋಮ- ಹವನ ನಡೆಸುವ ಈತ ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯ ತಂದೆ ಅಪಘಾತದಲ್ಲಿ ಮರಣ ಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಅಪ್ರಾಪ್ತ ಬಾಲಕಿಯನ್ನು 4 ತಿಂಗಳ ಗರ್ಭವತಿ ಮಾಡಿದ ಆರೋಪದ ಮೇಲೆ ಬಾಲಕಿಯ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು