1:00 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ತುಂಬೆ ವೆಂಟೆಂಡ್ ಡ್ಯಾಮ್ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತ: ಕಡಲನಗರಿಯಲ್ಲಿ ಜಲಕ್ಷಾಮ; ರೇಶನಿಂಗ್ ಜಾರಿ

05/05/2023, 14:49

ಮಂಗಳೂರು(reporterkarnataka.com):ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ತೀವ್ರ ಜಲಕ್ಷಾಮ ಎದುರಾಗಿದೆ. ಈ ನಡುವೆ ಮಂಗಳೂರಿನಲ್ಲಿ ರೇಶನಿಂಗ್ ಪದ್ಧತಿ ಜಾರಿಗೊಳಿಸಲಾಗಿದೆ.
ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿರುತ್ತದೆ ಎಂದು ತಿಳಿಸಲಾಗಿದೆ.
ನೀರಿನ ಅಭಾವದ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತದ ಸಭೆಯಲ್ಲಿ ಈ ಕೆಳಗಿನಂತೆ ನಿರ್ಣಯಗಳನ್ನು ಕೈಗೊಳ್ಳಲಾಗಿರುತ್ತದೆ.
* ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ (Alternative Days) ನೀರು ಬಿಡಲು ನಿರ್ಣಯಿಸಲಾಗಿದೆ.

* ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.

*ದಿನಾಂಕ 05.05.2023 ರಂದು ಮಂಗಳೂರು ನಗರ ಉತ್ತರಕ್ಕೆ, ದಿನಾಂಕ 06.05.2023 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.
ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು