5:37 AM Friday10 - April 2026
ಬ್ರೇಕಿಂಗ್ ನ್ಯೂಸ್
ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ?

ಇತ್ತೀಚಿನ ಸುದ್ದಿ

ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು: ತೀರ್ಥಹಳ್ಳಿಯ ದೇವಂಗಿ ಬಳಿ ದುರ್ಘಟನೆ

31/07/2024, 20:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ.
ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.
ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಆಗಲಿದ್ದಾರೆ.
ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಇದೆ ನದಿಯ ವ್ಯಾಪ್ತಿಗೆ ಬರುವ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿದ್ದು ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿತ್ತು. ಕಾಲು ಜಾರಿ ಹಳ್ಳಕ್ಕೆ ಬಿದ್ದು ತೇಲಿ ಹೋಗಿದ್ದು ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಯಕ್ಷಗಾನ ಕಲಾವಿದರಾದ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು