9:29 PM Saturday25 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ

12/08/2024, 22:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ 98,000 ಕ್ಯೂಸೆಕ್  ನೀರನ್ನು ನದಿಗೆ ಬಿಡಲಾಗುತ್ತಿದ್ದು,  ಪರಿಣಾಮವಾಗಿ ಎರಡುವರೆ ಅಡಿ ಗೇಜ್ ಕಡಿಮೆಯಾಗಿದೆ. ಇಂದು ಬೆಳಿಗ್ಗೆಯಿಂದ ನದಿಗೆ 1.40 ಲಕ್ಷ ಕ್ಯೂ ಸೆಕ್ ನೀರನ್ನು ಬಿಡಲಾಗುತ್ತಿದೆ ಎಂದರು.
ಒಂದು ತಂಡ ನೀರು ಕಡಿಮೆಯಾದ ಬಳಿಕ ಗೇಟ್  ಅಳವಡಿಕೆ ಬಗ್ಗೆ ಸಲಹೆ ನೀಡಿದೆ. ನೀರನ್ನು ಉಳಿಸುವ ಉದ್ದೇಶದಿಂದ ನಾನು ಹಾಗೂ ಸಂಸದರು ತಡರಾತ್ರಿವರೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಂದಾಲ್ ನಿಂದ ಪರಿಣಿತ ತಂತ್ರಜ್ಞರು ಹಾಗೂ ಇಂಜಿನಿಯರ್ ಗಳ ತಂಡವನ್ನು ಸೋಮವಾರ ರಾತ್ರಿಯೇ ಕರೆಸಿಕೊಂಡಿದ್ದೇವೆ. ಆ ತಂಡ ನೀರು ಖಾಲಿಯಾಗದಂತೆ ನೀರಿನೊಳಗೆ ಕೆಲಸ ಮಾಡುವ ಬಗ್ಗೆ ಸಲಹೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗನಿರಂತರವಾಗಿ ಸಂಪರ್ಕದಲ್ಲಿದ್ದೇವೆ.  ಮುಖ್ಯಮಂತ್ರಿಗಳ ಜೊತೆ ಕೂಡ ರಾತ್ರಿಯೇ ಚರ್ಚೆ ನಡೆಸಿದ್ದು ಅವರು ಕೂಡ ಕೆಲವೊಂದು ಸಲಹೆ ನೀಡಿದ್ದು ಜಿಂದಾಲ್ ತಾಂತ್ರಿಕ ತಂಡದೊಂದಿಗೂ  ಫೋನ್ನಲ್ಲಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಅಣೆಕಟ್ಟೆಯ ಮೇಲೆ ಕೆಲಸ ಮಾಡುವುದರಿಂದ ಕ್ರೇನ್ ನನ್ನು ಬಳಕೆ ಮಾಡಬೇಕಾಗುತ್ತದೆ. ಇದರಿಂದ ಸೇತುವೆ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಎಷ್ಟು ತೂಕದ ಕ್ರೇನನ್ನು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಈ ಸಂಬಂಧ ಪ್ಲೇಟ್ ಸಿದ್ದಪಡಿಸಲಾಗುತ್ತಿರುವ ಸ್ಥಳಕ್ಕೆ ಕೂಡ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಣಿತ ತಜ್ಞ ಕನ್ನಯ್ಯ ನಾಯ್ಡು ಅವರು ಡಿಸೈನ್ ಕಳಿಸಿದ್ದು ಅದರಂತೆ ಸ್ಥಳೀಯವಾಗಿ ನಾರಾಯಣ ಇಂಜಿನಿಯರಿಂಗ್ ಹಾಗೂ ಹಿಂದುಸ್ತಾನ್ ಸಂಸ್ಥೆ ಗಳು ಪ್ಲೇಟ್ ಸಿದ್ಧಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು