3:15 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ

12/08/2024, 22:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ 98,000 ಕ್ಯೂಸೆಕ್  ನೀರನ್ನು ನದಿಗೆ ಬಿಡಲಾಗುತ್ತಿದ್ದು,  ಪರಿಣಾಮವಾಗಿ ಎರಡುವರೆ ಅಡಿ ಗೇಜ್ ಕಡಿಮೆಯಾಗಿದೆ. ಇಂದು ಬೆಳಿಗ್ಗೆಯಿಂದ ನದಿಗೆ 1.40 ಲಕ್ಷ ಕ್ಯೂ ಸೆಕ್ ನೀರನ್ನು ಬಿಡಲಾಗುತ್ತಿದೆ ಎಂದರು.
ಒಂದು ತಂಡ ನೀರು ಕಡಿಮೆಯಾದ ಬಳಿಕ ಗೇಟ್  ಅಳವಡಿಕೆ ಬಗ್ಗೆ ಸಲಹೆ ನೀಡಿದೆ. ನೀರನ್ನು ಉಳಿಸುವ ಉದ್ದೇಶದಿಂದ ನಾನು ಹಾಗೂ ಸಂಸದರು ತಡರಾತ್ರಿವರೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಂದಾಲ್ ನಿಂದ ಪರಿಣಿತ ತಂತ್ರಜ್ಞರು ಹಾಗೂ ಇಂಜಿನಿಯರ್ ಗಳ ತಂಡವನ್ನು ಸೋಮವಾರ ರಾತ್ರಿಯೇ ಕರೆಸಿಕೊಂಡಿದ್ದೇವೆ. ಆ ತಂಡ ನೀರು ಖಾಲಿಯಾಗದಂತೆ ನೀರಿನೊಳಗೆ ಕೆಲಸ ಮಾಡುವ ಬಗ್ಗೆ ಸಲಹೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗನಿರಂತರವಾಗಿ ಸಂಪರ್ಕದಲ್ಲಿದ್ದೇವೆ.  ಮುಖ್ಯಮಂತ್ರಿಗಳ ಜೊತೆ ಕೂಡ ರಾತ್ರಿಯೇ ಚರ್ಚೆ ನಡೆಸಿದ್ದು ಅವರು ಕೂಡ ಕೆಲವೊಂದು ಸಲಹೆ ನೀಡಿದ್ದು ಜಿಂದಾಲ್ ತಾಂತ್ರಿಕ ತಂಡದೊಂದಿಗೂ  ಫೋನ್ನಲ್ಲಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಅಣೆಕಟ್ಟೆಯ ಮೇಲೆ ಕೆಲಸ ಮಾಡುವುದರಿಂದ ಕ್ರೇನ್ ನನ್ನು ಬಳಕೆ ಮಾಡಬೇಕಾಗುತ್ತದೆ. ಇದರಿಂದ ಸೇತುವೆ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಎಷ್ಟು ತೂಕದ ಕ್ರೇನನ್ನು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಈ ಸಂಬಂಧ ಪ್ಲೇಟ್ ಸಿದ್ದಪಡಿಸಲಾಗುತ್ತಿರುವ ಸ್ಥಳಕ್ಕೆ ಕೂಡ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಣಿತ ತಜ್ಞ ಕನ್ನಯ್ಯ ನಾಯ್ಡು ಅವರು ಡಿಸೈನ್ ಕಳಿಸಿದ್ದು ಅದರಂತೆ ಸ್ಥಳೀಯವಾಗಿ ನಾರಾಯಣ ಇಂಜಿನಿಯರಿಂಗ್ ಹಾಗೂ ಹಿಂದುಸ್ತಾನ್ ಸಂಸ್ಥೆ ಗಳು ಪ್ಲೇಟ್ ಸಿದ್ಧಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು