2:40 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ

12/08/2024, 22:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ 98,000 ಕ್ಯೂಸೆಕ್  ನೀರನ್ನು ನದಿಗೆ ಬಿಡಲಾಗುತ್ತಿದ್ದು,  ಪರಿಣಾಮವಾಗಿ ಎರಡುವರೆ ಅಡಿ ಗೇಜ್ ಕಡಿಮೆಯಾಗಿದೆ. ಇಂದು ಬೆಳಿಗ್ಗೆಯಿಂದ ನದಿಗೆ 1.40 ಲಕ್ಷ ಕ್ಯೂ ಸೆಕ್ ನೀರನ್ನು ಬಿಡಲಾಗುತ್ತಿದೆ ಎಂದರು.
ಒಂದು ತಂಡ ನೀರು ಕಡಿಮೆಯಾದ ಬಳಿಕ ಗೇಟ್  ಅಳವಡಿಕೆ ಬಗ್ಗೆ ಸಲಹೆ ನೀಡಿದೆ. ನೀರನ್ನು ಉಳಿಸುವ ಉದ್ದೇಶದಿಂದ ನಾನು ಹಾಗೂ ಸಂಸದರು ತಡರಾತ್ರಿವರೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಂದಾಲ್ ನಿಂದ ಪರಿಣಿತ ತಂತ್ರಜ್ಞರು ಹಾಗೂ ಇಂಜಿನಿಯರ್ ಗಳ ತಂಡವನ್ನು ಸೋಮವಾರ ರಾತ್ರಿಯೇ ಕರೆಸಿಕೊಂಡಿದ್ದೇವೆ. ಆ ತಂಡ ನೀರು ಖಾಲಿಯಾಗದಂತೆ ನೀರಿನೊಳಗೆ ಕೆಲಸ ಮಾಡುವ ಬಗ್ಗೆ ಸಲಹೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗನಿರಂತರವಾಗಿ ಸಂಪರ್ಕದಲ್ಲಿದ್ದೇವೆ.  ಮುಖ್ಯಮಂತ್ರಿಗಳ ಜೊತೆ ಕೂಡ ರಾತ್ರಿಯೇ ಚರ್ಚೆ ನಡೆಸಿದ್ದು ಅವರು ಕೂಡ ಕೆಲವೊಂದು ಸಲಹೆ ನೀಡಿದ್ದು ಜಿಂದಾಲ್ ತಾಂತ್ರಿಕ ತಂಡದೊಂದಿಗೂ  ಫೋನ್ನಲ್ಲಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಅಣೆಕಟ್ಟೆಯ ಮೇಲೆ ಕೆಲಸ ಮಾಡುವುದರಿಂದ ಕ್ರೇನ್ ನನ್ನು ಬಳಕೆ ಮಾಡಬೇಕಾಗುತ್ತದೆ. ಇದರಿಂದ ಸೇತುವೆ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಎಷ್ಟು ತೂಕದ ಕ್ರೇನನ್ನು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಈ ಸಂಬಂಧ ಪ್ಲೇಟ್ ಸಿದ್ದಪಡಿಸಲಾಗುತ್ತಿರುವ ಸ್ಥಳಕ್ಕೆ ಕೂಡ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಣಿತ ತಜ್ಞ ಕನ್ನಯ್ಯ ನಾಯ್ಡು ಅವರು ಡಿಸೈನ್ ಕಳಿಸಿದ್ದು ಅದರಂತೆ ಸ್ಥಳೀಯವಾಗಿ ನಾರಾಯಣ ಇಂಜಿನಿಯರಿಂಗ್ ಹಾಗೂ ಹಿಂದುಸ್ತಾನ್ ಸಂಸ್ಥೆ ಗಳು ಪ್ಲೇಟ್ ಸಿದ್ಧಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು