2:32 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ದುರಸ್ತಿ: ನೀರಿನೊಳಗೆ ಕೆಲಸ ಮಾಡುವ ಪರಿಣಿತರ ತಂಡ ಸಿದ್ಧ

12/08/2024, 22:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ತುಂಗಭದ್ರ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸುವ ಉದ್ದೇಶದಿಂದ ನೀರಿನೊಳಗೆ ಪ್ಲೇಟ್ ಇಳಿಸಲು ನಿರ್ಧರಿಸಲಾಗಿದ್ದು, ಪರಿಣಿತ ತಂಡ ಒಂದನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ 98,000 ಕ್ಯೂಸೆಕ್  ನೀರನ್ನು ನದಿಗೆ ಬಿಡಲಾಗುತ್ತಿದ್ದು,  ಪರಿಣಾಮವಾಗಿ ಎರಡುವರೆ ಅಡಿ ಗೇಜ್ ಕಡಿಮೆಯಾಗಿದೆ. ಇಂದು ಬೆಳಿಗ್ಗೆಯಿಂದ ನದಿಗೆ 1.40 ಲಕ್ಷ ಕ್ಯೂ ಸೆಕ್ ನೀರನ್ನು ಬಿಡಲಾಗುತ್ತಿದೆ ಎಂದರು.
ಒಂದು ತಂಡ ನೀರು ಕಡಿಮೆಯಾದ ಬಳಿಕ ಗೇಟ್  ಅಳವಡಿಕೆ ಬಗ್ಗೆ ಸಲಹೆ ನೀಡಿದೆ. ನೀರನ್ನು ಉಳಿಸುವ ಉದ್ದೇಶದಿಂದ ನಾನು ಹಾಗೂ ಸಂಸದರು ತಡರಾತ್ರಿವರೆಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಜಿಂದಾಲ್ ನಿಂದ ಪರಿಣಿತ ತಂತ್ರಜ್ಞರು ಹಾಗೂ ಇಂಜಿನಿಯರ್ ಗಳ ತಂಡವನ್ನು ಸೋಮವಾರ ರಾತ್ರಿಯೇ ಕರೆಸಿಕೊಂಡಿದ್ದೇವೆ. ಆ ತಂಡ ನೀರು ಖಾಲಿಯಾಗದಂತೆ ನೀರಿನೊಳಗೆ ಕೆಲಸ ಮಾಡುವ ಬಗ್ಗೆ ಸಲಹೆ ನೀಡಿದೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗನಿರಂತರವಾಗಿ ಸಂಪರ್ಕದಲ್ಲಿದ್ದೇವೆ.  ಮುಖ್ಯಮಂತ್ರಿಗಳ ಜೊತೆ ಕೂಡ ರಾತ್ರಿಯೇ ಚರ್ಚೆ ನಡೆಸಿದ್ದು ಅವರು ಕೂಡ ಕೆಲವೊಂದು ಸಲಹೆ ನೀಡಿದ್ದು ಜಿಂದಾಲ್ ತಾಂತ್ರಿಕ ತಂಡದೊಂದಿಗೂ  ಫೋನ್ನಲ್ಲಿ ಚರ್ಚಿಸಿದ್ದಾರೆ ಎಂದು ತಿಳಿಸಿದರು.
ಅಣೆಕಟ್ಟೆಯ ಮೇಲೆ ಕೆಲಸ ಮಾಡುವುದರಿಂದ ಕ್ರೇನ್ ನನ್ನು ಬಳಕೆ ಮಾಡಬೇಕಾಗುತ್ತದೆ. ಇದರಿಂದ ಸೇತುವೆ ಮೇಲೆ ಒತ್ತಡ ಹೆಚ್ಚಾಗುತ್ತದೆ. ಈ ಹಿನ್ನೆಲೆಯಲ್ಲಿ ಎಷ್ಟು ತೂಕದ ಕ್ರೇನನ್ನು ಬಳಸಬೇಕು ಎಂಬುದರ ಬಗ್ಗೆಯೂ ಕೂಡ ಚರ್ಚೆ ನಡೆದಿದೆ. ಈ ಸಂಬಂಧ ಪ್ಲೇಟ್ ಸಿದ್ದಪಡಿಸಲಾಗುತ್ತಿರುವ ಸ್ಥಳಕ್ಕೆ ಕೂಡ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಪರಿಣಿತ ತಜ್ಞ ಕನ್ನಯ್ಯ ನಾಯ್ಡು ಅವರು ಡಿಸೈನ್ ಕಳಿಸಿದ್ದು ಅದರಂತೆ ಸ್ಥಳೀಯವಾಗಿ ನಾರಾಯಣ ಇಂಜಿನಿಯರಿಂಗ್ ಹಾಗೂ ಹಿಂದುಸ್ತಾನ್ ಸಂಸ್ಥೆ ಗಳು ಪ್ಲೇಟ್ ಸಿದ್ಧಪಡಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು