11:31 PM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ತುಂಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅವಘಡ; ಈಗಾಗಲೇ 30 ಟಿಎಂಸಿ ಉಳಿಸಿದ್ದೇನೆ, 90 ಟಿಎಂಸಿ ನೀರು ನಿಶ್ಚಿತ: ಕನ್ನಯ್ಯ ನಾಯ್ಡು

17/08/2024, 16:44

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ನನಗೆ ಮೂರೂ ರಾಜ್ಯಗಳ ಜನರ ಬಗ್ಗೆ ಕಾಳಜಿ ಇರುವುದಕ್ಕೆ ಸೇವಾ ಭಾವದಿಂದ ಗೇಟ್ ಅಳವಡಿಕೆ ಮಾಡಿದ್ದೇನೆ, ಈಗಾಗಲೇ 30 ಟಿಎಂಸಿ ನೀರು ಉಳಿಸಿದ್ದೇನೆ, 90 ಟಿಎಂಸಿ ಅಡಿ ನೀರು ನಿಶ್ಚಿತವಾಗಿ ಸಿಗುತ್ತದೆ ಎಂದು ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೇಳಿದರು.
ಟಿಬಿಡ್ಯಾಂ ನಲ್ಲಿ ಶನಿವಾರ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಆತಂಕಪಡಬಾರದು, ಇನ್ನೆರಡು ಗೇಟ್ ಎಲಿಮೆಂಟ್ ಗಳು ಇಂದು ಅಳವಡಿಕೆಯಾಗಲಿವೆ, ಆಗ 90 ಟಿಎಂಸಿ ಅಡಿ ನೀರು ಸಂಗ್ರಹಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.
ಬಾಕಿ ಉಳಿದ ಗೇಟ್ ಗಳ ಅಳವಡಿಕೆ ಸೋಮವಾರ ಪೂರ್ಣಗೊಳ್ಳಲಿದೆ, ಇದು ಸ್ಟಾಪ್ ಲಾಗ್ ಗೇಟ್ ಅಲ್ಲ, ಇದು ಸ್ಟಾಪ್ ಲಾಗ್ ಅಷ್ಟೇ. ಅಂದರೆ ತಾತ್ಕಾಲಿಕ ತಡೆಗೋಡೆ ರೀತಿಯ ಗೇಟ್ ಅಷ್ಟೇ ಎಂದು ಅವರು ಹೇಳಿದರು.
ಮುಂದೆ ಕ್ರಸ್ಟ್‌ ಗೇಟ್ ಸಿದ್ಧವಾಗುವ ತನಕ ಇದು ಸಮರ್ಥವಾಗಿ ನೀರು ತಡೆಹಿಡಿಯುತ್ತದೆ, ಆದರೆ ಅಣೆಕಟ್ಟೆಯ ನೀರಿನ ನಿರ್ವಹಣೆಗಾಗಿ ಕ್ರೆಸ್ಟ್ ಗೇಟ್ ಸಜ್ಜುಗೊಳಿಸುವಂತೆ ಶಿಫಾರಸು ಮಾಡಿ ವರದಿ ನೀಡುತ್ತೇನೆ ಎಂದು ಅವರು ನುಡಿದರು.
ಎರಡು ವರ್ಷಗಳ ಹಿಂದೆ ನಾನು ಜಲಾಶಯಕ್ಕೆ ಬಂದಿದ್ದೆ. ಈ ಮೊದಲೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡೋದಕ್ಕೆ ಹೇಳಿದ್ದೆ. ಆದರೆ ಅವಾಗ ಎಲ್ಲಾ ಸರಿ ಇದೆ ಅಂತಾ ಹೇಳಿದ್ದರು ಎಂದರು.
ಈ ಘಟನೆ ನಡೆದಾಗ ನಾನು ಮಲಗಿದ್ದೆ, ಕಾಲ್ ಬಂತು ಕೂಡಲೇ ನಮ್ಮವರನ್ನ ಕರೆಸಿ ಮಾತನಾಡಿದೆ. ಸ್ಟಾಪ್ ಲಾಗ್ ಗೇಟ್ ಕೂಡಿಸೋ ಬಗ್ಗೆ ಚರ್ಚೆ ಮಾಡಿದೆ. ಮೂರು ರಾಜ್ಯಗಳ ನೀರಾವರಿ ಬಗ್ಗೆ ಚರ್ಚೆ ಮಾಡಿದೆವು. ಸ್ಟಾಪ್ ಲಾಗ್ ಗೇಟ್ ಕೂಡಿಸುವ ಬಗ್ಗೆ ಡಿಸೈನ್ ರೆಡಿ ಮಾಡಿದೆ. ಅದನ್ನ ಸಿಡಬ್ಲುಸಿ ಹಾಗೂ ಜಲಾನಯನ ಪ್ರದೇಶದಲ್ಲಿ ಅಪ್ರೂವಲ್ ತಗೊಂಡೆ ಎಂದು ವಿವರಿಸಿದರು.
ಒಂದು 100 ವರ್ಷ ಬಾಳಿಕೆ ಬರುತ್ತೆ. ಕ್ರಸ್ಟ್ ಗೇಟ್‌ಗಳು 45 ವರ್ಷ ಗೇಟ್ ಬಾಳಿಕೆ ಬರುತ್ತೆ. ಆದ್ರೆ ಇದು 70 ವರ್ಷ ಆಗಿದೆ. ಸಿಎಂ ಬಂದಾಗ ಒಂದು ಮನವಿ ಮಾಡಿದ್ರು. ಎಲ್ಲೋದ್ರೂ ನಿನ್ ಹೇಳ್ತಾರೆ ಅಂತಾ ಹೇಳಿ, ಏನಾದ್ರೂ ಮಾಡಿ ಬೆಳೆ ಬರುವಂತೆ ಮಾಡಿ ಎಂದು ಕೇಳಿಕೊಂಡ್ರು. ನಾನು ಆಗ ಅವ್ರಿಗೆ ಅಭಯ ನೀಡಿದೆ. ಆಗ ಎಲ್ಲಾ ಸಹಾಯ ಮಾಡ್ತೇನೆ ಅಂತಾ ಸಿಎಂ ಹೇಳಿದ್ರು. ಸ್ಟಾಪ್ ಲಾಗ್ ಗೇಟ್ ಅಳವಡಿಸೋಕೆ ಬೃಹತ್ ಕ್ರೇನ್‌ಗಳು ಬೇಕಿತ್ತು. ಆ ಸಲಕರಣೆ ಇರೋದು ಜಿಂದಾಲ್‌ನಲ್ಲಿ ಮಾತ್ರ. ಆದ್ರೂ ನಮಗೆ ಎರಡು ದಿನ ವ್ಯರ್ಥ ಆಯ್ತು ಆಗ ತುಂಬಾ ಅಪ್ಸೆಟ್ ಆಯ್ತು. ಮೇಲೆ ಸ್ಕೈ ವಾಕ್ ಹಾಗೂ ಭೀಮ್ ತೆಗೆಯೋಕೆ ಕೇಂದ್ರದ ಫರ್ಮೀಷನ್ ಇಲ್ಲ ಅಂದ್ರು. ತುಂಬಾ ಅಪ್ಸೆಟ್ ಆಗಿದ್ವಿ. ಸಿಎಂ ಅವ್ರಿಗೆ ಹೇಳಿ ರಿಸ್ಕ್‌ನಲ್ಲಿ ಸ್ಕೈ ವಾಕ್ ತೆಗೆತೀವಿ ಅಂತಾ ಹೇಳಿ ಫರ್ಮೀಷನ್ ತಗೊಳ್ಳೋದಕ್ಕೆ ಹೇಳಿದ್ವಿ. ಆಗ ಸಿಎಂ ನೀವು ಮಾಡಿ ಅಂತಾ ಹೇಳಿ ಫರ್ಮೀಷನ್ ತಗೊಂಡ್ರು. ಆಮೇಲೆ ಕೆಲಸ ಆರಂಭ ಮಾಡಿದ್ವಿ ಎಂದು ಅವರು ವಿವರಿಸಿದರು.
*ಯಶಸ್ವಿ ಆಗಿದ್ದೇವೆ:* ಗೇಟ್ ಅಳವಡಿಸುವ ಕಾರ್ಯಾಚರಣೆಯಲ್ಲಿ ನಾವು ಯಶಸ್ವಿ ಆಗಿದ್ದೇವೆ. ಸೋಮವಾರದೊಳಗೆ ಎಲ್ಲಾ ಕೆಲಸ ಮುಗಿಸ್ತೇವೆ. ರೈತರಿಗೆ ಎರಡು ಬೆಳೆಗೆ ನೀರು ಹಾಗೂ ಕುಡಿಯೋದಕ್ಕೂ ನೀರು ಲಭ್ಯವಾಗ್ತದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಆಗುತ್ತೆ ಯಾವುದೇ ಆತಂಕ ಬೇಡ ಎಂದ ಕನ್ನಯ್ಯ ನಾಯ್ಡು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು