11:55 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ತುಂಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅವಘಡ; ಈಗಾಗಲೇ 30 ಟಿಎಂಸಿ ಉಳಿಸಿದ್ದೇನೆ, 90 ಟಿಎಂಸಿ ನೀರು ನಿಶ್ಚಿತ: ಕನ್ನಯ್ಯ ನಾಯ್ಡು

17/08/2024, 16:44

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ನನಗೆ ಮೂರೂ ರಾಜ್ಯಗಳ ಜನರ ಬಗ್ಗೆ ಕಾಳಜಿ ಇರುವುದಕ್ಕೆ ಸೇವಾ ಭಾವದಿಂದ ಗೇಟ್ ಅಳವಡಿಕೆ ಮಾಡಿದ್ದೇನೆ, ಈಗಾಗಲೇ 30 ಟಿಎಂಸಿ ನೀರು ಉಳಿಸಿದ್ದೇನೆ, 90 ಟಿಎಂಸಿ ಅಡಿ ನೀರು ನಿಶ್ಚಿತವಾಗಿ ಸಿಗುತ್ತದೆ ಎಂದು ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೇಳಿದರು.
ಟಿಬಿಡ್ಯಾಂ ನಲ್ಲಿ ಶನಿವಾರ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಆತಂಕಪಡಬಾರದು, ಇನ್ನೆರಡು ಗೇಟ್ ಎಲಿಮೆಂಟ್ ಗಳು ಇಂದು ಅಳವಡಿಕೆಯಾಗಲಿವೆ, ಆಗ 90 ಟಿಎಂಸಿ ಅಡಿ ನೀರು ಸಂಗ್ರಹಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.
ಬಾಕಿ ಉಳಿದ ಗೇಟ್ ಗಳ ಅಳವಡಿಕೆ ಸೋಮವಾರ ಪೂರ್ಣಗೊಳ್ಳಲಿದೆ, ಇದು ಸ್ಟಾಪ್ ಲಾಗ್ ಗೇಟ್ ಅಲ್ಲ, ಇದು ಸ್ಟಾಪ್ ಲಾಗ್ ಅಷ್ಟೇ. ಅಂದರೆ ತಾತ್ಕಾಲಿಕ ತಡೆಗೋಡೆ ರೀತಿಯ ಗೇಟ್ ಅಷ್ಟೇ ಎಂದು ಅವರು ಹೇಳಿದರು.
ಮುಂದೆ ಕ್ರಸ್ಟ್‌ ಗೇಟ್ ಸಿದ್ಧವಾಗುವ ತನಕ ಇದು ಸಮರ್ಥವಾಗಿ ನೀರು ತಡೆಹಿಡಿಯುತ್ತದೆ, ಆದರೆ ಅಣೆಕಟ್ಟೆಯ ನೀರಿನ ನಿರ್ವಹಣೆಗಾಗಿ ಕ್ರೆಸ್ಟ್ ಗೇಟ್ ಸಜ್ಜುಗೊಳಿಸುವಂತೆ ಶಿಫಾರಸು ಮಾಡಿ ವರದಿ ನೀಡುತ್ತೇನೆ ಎಂದು ಅವರು ನುಡಿದರು.
ಎರಡು ವರ್ಷಗಳ ಹಿಂದೆ ನಾನು ಜಲಾಶಯಕ್ಕೆ ಬಂದಿದ್ದೆ. ಈ ಮೊದಲೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡೋದಕ್ಕೆ ಹೇಳಿದ್ದೆ. ಆದರೆ ಅವಾಗ ಎಲ್ಲಾ ಸರಿ ಇದೆ ಅಂತಾ ಹೇಳಿದ್ದರು ಎಂದರು.
ಈ ಘಟನೆ ನಡೆದಾಗ ನಾನು ಮಲಗಿದ್ದೆ, ಕಾಲ್ ಬಂತು ಕೂಡಲೇ ನಮ್ಮವರನ್ನ ಕರೆಸಿ ಮಾತನಾಡಿದೆ. ಸ್ಟಾಪ್ ಲಾಗ್ ಗೇಟ್ ಕೂಡಿಸೋ ಬಗ್ಗೆ ಚರ್ಚೆ ಮಾಡಿದೆ. ಮೂರು ರಾಜ್ಯಗಳ ನೀರಾವರಿ ಬಗ್ಗೆ ಚರ್ಚೆ ಮಾಡಿದೆವು. ಸ್ಟಾಪ್ ಲಾಗ್ ಗೇಟ್ ಕೂಡಿಸುವ ಬಗ್ಗೆ ಡಿಸೈನ್ ರೆಡಿ ಮಾಡಿದೆ. ಅದನ್ನ ಸಿಡಬ್ಲುಸಿ ಹಾಗೂ ಜಲಾನಯನ ಪ್ರದೇಶದಲ್ಲಿ ಅಪ್ರೂವಲ್ ತಗೊಂಡೆ ಎಂದು ವಿವರಿಸಿದರು.
ಒಂದು 100 ವರ್ಷ ಬಾಳಿಕೆ ಬರುತ್ತೆ. ಕ್ರಸ್ಟ್ ಗೇಟ್‌ಗಳು 45 ವರ್ಷ ಗೇಟ್ ಬಾಳಿಕೆ ಬರುತ್ತೆ. ಆದ್ರೆ ಇದು 70 ವರ್ಷ ಆಗಿದೆ. ಸಿಎಂ ಬಂದಾಗ ಒಂದು ಮನವಿ ಮಾಡಿದ್ರು. ಎಲ್ಲೋದ್ರೂ ನಿನ್ ಹೇಳ್ತಾರೆ ಅಂತಾ ಹೇಳಿ, ಏನಾದ್ರೂ ಮಾಡಿ ಬೆಳೆ ಬರುವಂತೆ ಮಾಡಿ ಎಂದು ಕೇಳಿಕೊಂಡ್ರು. ನಾನು ಆಗ ಅವ್ರಿಗೆ ಅಭಯ ನೀಡಿದೆ. ಆಗ ಎಲ್ಲಾ ಸಹಾಯ ಮಾಡ್ತೇನೆ ಅಂತಾ ಸಿಎಂ ಹೇಳಿದ್ರು. ಸ್ಟಾಪ್ ಲಾಗ್ ಗೇಟ್ ಅಳವಡಿಸೋಕೆ ಬೃಹತ್ ಕ್ರೇನ್‌ಗಳು ಬೇಕಿತ್ತು. ಆ ಸಲಕರಣೆ ಇರೋದು ಜಿಂದಾಲ್‌ನಲ್ಲಿ ಮಾತ್ರ. ಆದ್ರೂ ನಮಗೆ ಎರಡು ದಿನ ವ್ಯರ್ಥ ಆಯ್ತು ಆಗ ತುಂಬಾ ಅಪ್ಸೆಟ್ ಆಯ್ತು. ಮೇಲೆ ಸ್ಕೈ ವಾಕ್ ಹಾಗೂ ಭೀಮ್ ತೆಗೆಯೋಕೆ ಕೇಂದ್ರದ ಫರ್ಮೀಷನ್ ಇಲ್ಲ ಅಂದ್ರು. ತುಂಬಾ ಅಪ್ಸೆಟ್ ಆಗಿದ್ವಿ. ಸಿಎಂ ಅವ್ರಿಗೆ ಹೇಳಿ ರಿಸ್ಕ್‌ನಲ್ಲಿ ಸ್ಕೈ ವಾಕ್ ತೆಗೆತೀವಿ ಅಂತಾ ಹೇಳಿ ಫರ್ಮೀಷನ್ ತಗೊಳ್ಳೋದಕ್ಕೆ ಹೇಳಿದ್ವಿ. ಆಗ ಸಿಎಂ ನೀವು ಮಾಡಿ ಅಂತಾ ಹೇಳಿ ಫರ್ಮೀಷನ್ ತಗೊಂಡ್ರು. ಆಮೇಲೆ ಕೆಲಸ ಆರಂಭ ಮಾಡಿದ್ವಿ ಎಂದು ಅವರು ವಿವರಿಸಿದರು.
*ಯಶಸ್ವಿ ಆಗಿದ್ದೇವೆ:* ಗೇಟ್ ಅಳವಡಿಸುವ ಕಾರ್ಯಾಚರಣೆಯಲ್ಲಿ ನಾವು ಯಶಸ್ವಿ ಆಗಿದ್ದೇವೆ. ಸೋಮವಾರದೊಳಗೆ ಎಲ್ಲಾ ಕೆಲಸ ಮುಗಿಸ್ತೇವೆ. ರೈತರಿಗೆ ಎರಡು ಬೆಳೆಗೆ ನೀರು ಹಾಗೂ ಕುಡಿಯೋದಕ್ಕೂ ನೀರು ಲಭ್ಯವಾಗ್ತದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಆಗುತ್ತೆ ಯಾವುದೇ ಆತಂಕ ಬೇಡ ಎಂದ ಕನ್ನಯ್ಯ ನಾಯ್ಡು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು