8:24 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ತುಂಭದ್ರಾ ಜಲಾಶಯ ಕ್ರಸ್ಟ್ ಗೇಟ್ ಅವಘಡ; ಈಗಾಗಲೇ 30 ಟಿಎಂಸಿ ಉಳಿಸಿದ್ದೇನೆ, 90 ಟಿಎಂಸಿ ನೀರು ನಿಶ್ಚಿತ: ಕನ್ನಯ್ಯ ನಾಯ್ಡು

17/08/2024, 16:44

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ನನಗೆ ಮೂರೂ ರಾಜ್ಯಗಳ ಜನರ ಬಗ್ಗೆ ಕಾಳಜಿ ಇರುವುದಕ್ಕೆ ಸೇವಾ ಭಾವದಿಂದ ಗೇಟ್ ಅಳವಡಿಕೆ ಮಾಡಿದ್ದೇನೆ, ಈಗಾಗಲೇ 30 ಟಿಎಂಸಿ ನೀರು ಉಳಿಸಿದ್ದೇನೆ, 90 ಟಿಎಂಸಿ ಅಡಿ ನೀರು ನಿಶ್ಚಿತವಾಗಿ ಸಿಗುತ್ತದೆ ಎಂದು ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಹೇಳಿದರು.
ಟಿಬಿಡ್ಯಾಂ ನಲ್ಲಿ ಶನಿವಾರ ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಆತಂಕಪಡಬಾರದು, ಇನ್ನೆರಡು ಗೇಟ್ ಎಲಿಮೆಂಟ್ ಗಳು ಇಂದು ಅಳವಡಿಕೆಯಾಗಲಿವೆ, ಆಗ 90 ಟಿಎಂಸಿ ಅಡಿ ನೀರು ಸಂಗ್ರಹಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.
ಬಾಕಿ ಉಳಿದ ಗೇಟ್ ಗಳ ಅಳವಡಿಕೆ ಸೋಮವಾರ ಪೂರ್ಣಗೊಳ್ಳಲಿದೆ, ಇದು ಸ್ಟಾಪ್ ಲಾಗ್ ಗೇಟ್ ಅಲ್ಲ, ಇದು ಸ್ಟಾಪ್ ಲಾಗ್ ಅಷ್ಟೇ. ಅಂದರೆ ತಾತ್ಕಾಲಿಕ ತಡೆಗೋಡೆ ರೀತಿಯ ಗೇಟ್ ಅಷ್ಟೇ ಎಂದು ಅವರು ಹೇಳಿದರು.
ಮುಂದೆ ಕ್ರಸ್ಟ್‌ ಗೇಟ್ ಸಿದ್ಧವಾಗುವ ತನಕ ಇದು ಸಮರ್ಥವಾಗಿ ನೀರು ತಡೆಹಿಡಿಯುತ್ತದೆ, ಆದರೆ ಅಣೆಕಟ್ಟೆಯ ನೀರಿನ ನಿರ್ವಹಣೆಗಾಗಿ ಕ್ರೆಸ್ಟ್ ಗೇಟ್ ಸಜ್ಜುಗೊಳಿಸುವಂತೆ ಶಿಫಾರಸು ಮಾಡಿ ವರದಿ ನೀಡುತ್ತೇನೆ ಎಂದು ಅವರು ನುಡಿದರು.
ಎರಡು ವರ್ಷಗಳ ಹಿಂದೆ ನಾನು ಜಲಾಶಯಕ್ಕೆ ಬಂದಿದ್ದೆ. ಈ ಮೊದಲೇ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಮಾಡೋದಕ್ಕೆ ಹೇಳಿದ್ದೆ. ಆದರೆ ಅವಾಗ ಎಲ್ಲಾ ಸರಿ ಇದೆ ಅಂತಾ ಹೇಳಿದ್ದರು ಎಂದರು.
ಈ ಘಟನೆ ನಡೆದಾಗ ನಾನು ಮಲಗಿದ್ದೆ, ಕಾಲ್ ಬಂತು ಕೂಡಲೇ ನಮ್ಮವರನ್ನ ಕರೆಸಿ ಮಾತನಾಡಿದೆ. ಸ್ಟಾಪ್ ಲಾಗ್ ಗೇಟ್ ಕೂಡಿಸೋ ಬಗ್ಗೆ ಚರ್ಚೆ ಮಾಡಿದೆ. ಮೂರು ರಾಜ್ಯಗಳ ನೀರಾವರಿ ಬಗ್ಗೆ ಚರ್ಚೆ ಮಾಡಿದೆವು. ಸ್ಟಾಪ್ ಲಾಗ್ ಗೇಟ್ ಕೂಡಿಸುವ ಬಗ್ಗೆ ಡಿಸೈನ್ ರೆಡಿ ಮಾಡಿದೆ. ಅದನ್ನ ಸಿಡಬ್ಲುಸಿ ಹಾಗೂ ಜಲಾನಯನ ಪ್ರದೇಶದಲ್ಲಿ ಅಪ್ರೂವಲ್ ತಗೊಂಡೆ ಎಂದು ವಿವರಿಸಿದರು.
ಒಂದು 100 ವರ್ಷ ಬಾಳಿಕೆ ಬರುತ್ತೆ. ಕ್ರಸ್ಟ್ ಗೇಟ್‌ಗಳು 45 ವರ್ಷ ಗೇಟ್ ಬಾಳಿಕೆ ಬರುತ್ತೆ. ಆದ್ರೆ ಇದು 70 ವರ್ಷ ಆಗಿದೆ. ಸಿಎಂ ಬಂದಾಗ ಒಂದು ಮನವಿ ಮಾಡಿದ್ರು. ಎಲ್ಲೋದ್ರೂ ನಿನ್ ಹೇಳ್ತಾರೆ ಅಂತಾ ಹೇಳಿ, ಏನಾದ್ರೂ ಮಾಡಿ ಬೆಳೆ ಬರುವಂತೆ ಮಾಡಿ ಎಂದು ಕೇಳಿಕೊಂಡ್ರು. ನಾನು ಆಗ ಅವ್ರಿಗೆ ಅಭಯ ನೀಡಿದೆ. ಆಗ ಎಲ್ಲಾ ಸಹಾಯ ಮಾಡ್ತೇನೆ ಅಂತಾ ಸಿಎಂ ಹೇಳಿದ್ರು. ಸ್ಟಾಪ್ ಲಾಗ್ ಗೇಟ್ ಅಳವಡಿಸೋಕೆ ಬೃಹತ್ ಕ್ರೇನ್‌ಗಳು ಬೇಕಿತ್ತು. ಆ ಸಲಕರಣೆ ಇರೋದು ಜಿಂದಾಲ್‌ನಲ್ಲಿ ಮಾತ್ರ. ಆದ್ರೂ ನಮಗೆ ಎರಡು ದಿನ ವ್ಯರ್ಥ ಆಯ್ತು ಆಗ ತುಂಬಾ ಅಪ್ಸೆಟ್ ಆಯ್ತು. ಮೇಲೆ ಸ್ಕೈ ವಾಕ್ ಹಾಗೂ ಭೀಮ್ ತೆಗೆಯೋಕೆ ಕೇಂದ್ರದ ಫರ್ಮೀಷನ್ ಇಲ್ಲ ಅಂದ್ರು. ತುಂಬಾ ಅಪ್ಸೆಟ್ ಆಗಿದ್ವಿ. ಸಿಎಂ ಅವ್ರಿಗೆ ಹೇಳಿ ರಿಸ್ಕ್‌ನಲ್ಲಿ ಸ್ಕೈ ವಾಕ್ ತೆಗೆತೀವಿ ಅಂತಾ ಹೇಳಿ ಫರ್ಮೀಷನ್ ತಗೊಳ್ಳೋದಕ್ಕೆ ಹೇಳಿದ್ವಿ. ಆಗ ಸಿಎಂ ನೀವು ಮಾಡಿ ಅಂತಾ ಹೇಳಿ ಫರ್ಮೀಷನ್ ತಗೊಂಡ್ರು. ಆಮೇಲೆ ಕೆಲಸ ಆರಂಭ ಮಾಡಿದ್ವಿ ಎಂದು ಅವರು ವಿವರಿಸಿದರು.
*ಯಶಸ್ವಿ ಆಗಿದ್ದೇವೆ:* ಗೇಟ್ ಅಳವಡಿಸುವ ಕಾರ್ಯಾಚರಣೆಯಲ್ಲಿ ನಾವು ಯಶಸ್ವಿ ಆಗಿದ್ದೇವೆ. ಸೋಮವಾರದೊಳಗೆ ಎಲ್ಲಾ ಕೆಲಸ ಮುಗಿಸ್ತೇವೆ. ರೈತರಿಗೆ ಎರಡು ಬೆಳೆಗೆ ನೀರು ಹಾಗೂ ಕುಡಿಯೋದಕ್ಕೂ ನೀರು ಲಭ್ಯವಾಗ್ತದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಆಗುತ್ತೆ ಯಾವುದೇ ಆತಂಕ ಬೇಡ ಎಂದ ಕನ್ನಯ್ಯ ನಾಯ್ಡು ಭರವಸೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು