4:21 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ತುಂಗಭದ್ರಾ ಜಲಾಶಯದ ಅವಘಡ: ಬಳ್ಳಾರಿ ಜಿಲ್ಲೆಯಲ್ಲಿ ಕೆಲವಡೆ ಬಿತ್ತನೆಗೆ ತೊಂದರೆ

12/08/2024, 17:21

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿಯ ಜೀವನಾಡಿ ತುಂಗಭದ್ರಾ ಜಲಾಶಯ ನಮ್ಮ ಕೈಬಿಡುವುದಿಲ್ಲ ಎಂದು ನಂಬಿದ್ದ ರೈತರಿಗೆ ಜಲಾಶಯದ 19ನೇ (ಕರ್ನಾಟಕ ಭಾಗದ) ಗೇಟ್‌, ಸರಪಳಿ ಕಳಚಿದ ಅವಘಡದಿಂದ ಕೆಲವಡೆ ಬಿತ್ತನೆಗೆ ತೊಂದರೆಯಾಗಿದೆ.
ಶನಿವಾರ ಸಂಜೆಯಷ್ಟೇ 105 ಟಿಎಂಸಿ ನೀರಿನೊಂದಿಗೆ ತುಂಗಭದ್ರಾ ಜಲಾಶಯ ತುಂಬಿ ತುಳುಕುತ್ತಿತ್ತು. ಒಂದು ಬೆಳೆಯಲ್ಲ. ಈ ಭಾರಿ ಎರಡನೇ ಬೆಳೆಗೂ ಜಲಾಶಯ ನೀರುಣಿಸುತ್ತದೆ ಎಂಬ ದೃಢವಾದ ನಂಬಿಕೆಯಲ್ಲಿ ರೈತರಿದ್ದರು. ಆದರೆ, ರಾತ್ರಿ 10.50ರಲ್ಲಿ ಸಂಭವಿಸಿರುವ ಅವಘಡವೊಂದು ಆ ನಂಬಿಕೆಗೆ ಭಂಗ ತಂದಿದೆ. 
ಜಲಾಶಯದ 19ನೇ (ಕರ್ನಾಟಕ ಭಾಗದ) ಗೇಟ್‌, ಸರಪಳಿ ಕಳಚಿಕೊಂಡು ಕೊಚ್ಚಿಕೊಂಡು ಹೋಗಿದೆ. ಹೀಗಾಗಿ ನೀರು ಅನಿಯಂತ್ರಿತವಾಗಿ ನದಿಗೆ ಹರಿದು ಹೋಗುತ್ತಿದೆ. ಮುಂದಿನ ದಿನಗಳಲ್ಲಿ ಹರಿದುಬರಲಿರುವ ನೀರು ಸಂಗ್ರಹಿಸಿಟ್ಟುಕೊಳ್ಳಬೇಕಿದ್ದರೆ ಗೇಟ್‌ ದುಸ್ತಿಯಾಗಬೇಕು. ಗೇಟ್‌ ದುರಸ್ತೆಯಾಗಬೇಕಿದ್ದರೆ  ಸದ್ಯ ಜಲಾಶಯದಲ್ಲಿನ 20 ಅಡಿಯಷ್ಟು ನೀರನ್ನು ಖಾಲಿ ಮಾಡಬೇಕಾದ ಸಂದಿಗ್ಧತೆ ಸದ್ಯ ಎದುರಾಗಿದೆ. ಅಂದರೆ ಹೆಚ್ಚುಕಡಿಮೆ 60 ಟಿಎಂಸಿ ನೀರು ಖಾಲಿ ಮಾಡಬೇಕು ಎಂದು ಅಧಿಕಾರಿಗಳು, ಜನಪ್ರತಿನಿಧಿಗಳು ಹೇಳಿದ್ದಾರೆ. 
ಇದರೊಂದಿಗೆ ಎರಡನೇ ಬೆಳೆಯ ನಿರೀಕ್ಷೆ ಇರಲಿ, ಮೊದಲೇ ಬೆಳೆಗೆ ನೀರಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ. ನೀರಾವರಿ ಆಶ್ರಿತ ಪ್ರದೇಶಗಳಲ್ಲಿ ಈ ತಿಂಗಳಿಂದ ಬಿತ್ತನೆ, ನಾಟಿ ಆರಂಭವಾಗಿದ್ದವು. ಅಂದಾಜು ಶೇ. 45ರಿಂದ ಶೇ. 50 ಬಿತ್ತನೆ, ನಾಟಿ ಆಗಿತ್ತು. ಇನ್ನೂ ಕೆಲ ರೈತರು ಈಗಷ್ಟೇ ಬಿತ್ತನೆ ಮಾಡಲು ಸಿದ್ಧತೆಯಲ್ಲಿ ತೊಡಗಿದ್ದರು. ಹೀಗಾಗಿ ಬೆಳೆ ರಕ್ಷಣೆ, ಬಿತ್ತನೆ ಮೇಲೆ ತುಂಗಭದ್ರಾದಲ್ಲಿನ ಅವಘಡ ಪ್ರಭಾವಬೀರಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಇಲಾಖೆಯ ಉಪ ನಿರ್ದೇಶಕ ಕೆಂಗೇಗೌಡ, ‘ತುಂಗಭದ್ರಾ ಜಲಾಶಯದಲ್ಲಿ ಸಂಭವಿಸಿರುವ ಅವಘಡ ಜಿಲ್ಲೆಯ ಕೃಷಿ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂದು ಖಚಿತವಾಗಿ ಹೇಳುವುದು ಈ ಸಂದರ್ಭದಕ್ಕೆ ಕಷ್ಟ. ಒಂದು ವೇಳೆ ನೀರು ಖಾಲಿಯಾದರೆ, ಮುಂಗಾರು ಹಂಗಾಮಿನ ಬೆಳೆಗೇ ನೀರು ಹೊಂದಿಸುವುದು ಕಷ್ಟವಾಗುವುದಂತೂ ನಿಶ್ಚಿತ. ಇನ್ನು ಎರಡು ದಿನದಲ್ಲಿ ಏನಾಗಲಿದೆ, ಎಷ್ಟು ನೀರು ಖಾಲಿಯಾಗಲಿದೆ, ಎಷ್ಟು ನೀರು ಉಳಿಯುತ್ತದೆ, ಎಷ್ಟು ನೀರು ನಮಗೆ ದಕ್ಕಲಿದೆ ಎಂಬುದು ಮುಖ್ಯವಾಗುತ್ತದೆ. ಜಿಲ್ಲೆಯಲ್ಲಿ ಸದ್ಯ ನೀರಾವರಿ ಆಶ್ರಿತ ಪ್ರದೇಶಗಳಲ್ಲಿ ಈಗಾಗಲೇ ಶೇ 50ರಷ್ಟು ಬಿತ್ತನೆಯಾಗಿದೆ.
ಇನ್ನುಳಿದ ಪ್ರದೇಶದಲ್ಲಿ ಬಿತ್ತನೆ, ನಾಟಿ ಕಾರ್ಯ ಭರದಿಂದ ಸಾಗುತ್ತಿದೆ. ನೀರು ಅಲಭ್ಯವಾದರೆ ಬಿತ್ತನೆ ಮೇಲೆ ಪರಿಣಾಮ ಬೀರುತ್ತದೆ. ಅದೇ ವೇಳೆ ಬೆಳೆ ರಕ್ಷಣೆಗೂ ಸಮಸ್ಯೆಯಾಗುತ್ತದೆ. ಹಾಗೊಂದು ವೇಳೆ ಜಲಾಶಯದಲ್ಲಿ ನೀರು ಗಣನೀಯ ಪ್ರಮಾಣದಲ್ಲಿ ಕುಸಿದರೆ ಪರ್ಯಾಯ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ನಾವು ಸಲಹೆ ನೀಡಲಿದ್ದೇವೆ. ಆದರೆ, ಈಗಲೇ ಏನನ್ನೂ ಹೇಳಲು ಸಾಧ್ಯವಾಗುವುದಿಲ್ಲ’ ಎಂದಿದ್ದಾರೆ.  

ಇತ್ತೀಚಿನ ಸುದ್ದಿ

ಜಾಹೀರಾತು