1:48 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ನಾಗರಿಕರ ಎಲ್ಲ ಹಕ್ಕು ಕಸಿಯಲಾಯಿತು: ‘ಮನ್ ಕಿ ಬಾತ್’ನಲ್ಲಿ  ಪ್ರಧಾನಿ ಮೋದಿ

27/06/2022, 00:09

ಹೊಸದಿಲ್ಲಿ(reporterkarnataka.com): ದೇಶದ ಮೇಲೆ 1975ರಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಹತ್ತಿಕ್ಕುವ 

ಪ್ರಯತ್ನ ನಡೆಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತದ ಇತಿಹಾಸದ ಕರಾಳ ಅಧ್ಯಾಯವಾದ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ, ತಮ್ಮ ಮಾಸಿಕ ಮನ್ ಕಿ ಬಾತ್ ಭಾಷಣವನ್ನು ಪ್ರಾರಂಭಿಸಿದರು. ತುರ್ತುಪರಿಸ್ಥಿತಿಯನ್ನ ವಿರೋಧಿಸಿದ ಎಲ್ಲರನ್ನೂ ಶ್ಲಾಘಿಸಿದ ಪ್ರಧಾನಿ, ನಮ್ಮ ಪ್ರಜಾಸತ್ತಾತ್ಮಕ ಮನಸ್ಥಿತಿಯೇ ಅಂತಿಮವಾಗಿ ಮೇಲುಗೈ ಸಾಧಿಸಿತು ಎಂದರು.

ತಮ್ಮ ಮನ್ ಕಿ ಬಾತ್ ರೇಡಿಯೋ ಪ್ರಸಾರದಲ್ಲಿ ಅಂದಿನ ಇಂದಿರಾ ಗಾಂಧಿ ನೇತೃತ್ವದ ಸರ್ಕಾರ ಹೇರಿದ ತುರ್ತು ಪರಿಸ್ಥಿತಿಯನ್ನ ನೆನಪಿಸಿಕೊಂಡ ಮೋದಿ, ಆ ಸಮಯದಲ್ಲಿ ಎಲ್ಲಾ ಹಕ್ಕುಗಳನ್ನ ಕಸಿದುಕೊಳ್ಳಲಾಯಿತು ಎಂದು ಹೇಳಿದರು. ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು 1977ರ ಮಾರ್ಚ್ 21ರಂದು ಅದನ್ನು ತೆಗೆದುಹಾಕಲಾಯಿತು.

‘ಇಂದು, ದೇಶವು ಸ್ವಾತಂತ್ರ್ಯದ 75ನೇ ವರ್ಷವನ್ನ ಆಚರಿಸುತ್ತಿರುವಾಗ, ತುರ್ತು ಪರಿಸ್ಥಿತಿಯ ಕರಾಳ ಅವಧಿಯನ್ನು ನಾವು ಮರೆಯಬಾರದು. ಅಮೃತ ಮಹೋತ್ಸವವು ವಿದೇಶಿ ಆಳ್ವಿಕೆಯಿಂದ ಸ್ವಾತಂತ್ರ್ಯದ ಕಥೆಗಳನ್ನ ಹೇಳುವುದಲ್ಲದೇ ಸ್ವಾತಂತ್ರ್ಯದ 75 ವರ್ಷಗಳ ಪ್ರಯಾಣವನ್ನ ಸಹ ನಮಗೆ ತಿಳಿಸುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ‘ನಾನು ದೇಶದ ಯುವಕರಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ, ನಿಮ್ಮ ಹೆತ್ತವರು ಒಮ್ಮೆ ನಿಮ್ಮ ವಯಸ್ಸಿನವರಾಗಿದ್ದಾಗ, ಅವರ ಬದುಕುವ ಹಕ್ಕನ್ನ ಸಹ ಕಸಿದುಕೊಳ್ಳಲಾಯಿತು ಎಂದು ನಿಮಗೆ ತಿಳಿದಿದೆಯೇ? ತುರ್ತು ಪರಿಸ್ಥಿತಿ ಹೇರಿದ 1975ರ ಜೂನ್ ತಿಂಗಳಲ್ಲಿ ಇದು ಸಂಭವಿಸಿತ್ತು’ ಎಂದು ಪ್ರಧಾನಿ ಹೇಳಿದರು.

‘ಆ ಅವಧಿಯಲ್ಲಿ, ನಾಗರಿಕರ ಎಲ್ಲಾ ಹಕ್ಕುಗಳನ್ನು ಕಸಿದುಕೊಳ್ಳಲಾಯಿತು. ಈ ಹಕ್ಕುಗಳಲ್ಲಿ ಸಂವಿಧಾನದ ಅನುಚ್ಛೇದ 21ರ ಅಡಿಯಲ್ಲಿ ಖಾತರಿಪಡಿಸಲಾದ ನಾಗರಿಕರಿಗೆ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯವೂ ಒಂದು. ಆ ಸಮಯದಲ್ಲಿ, ಭಾರತದಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದವು’ ಎಂದು ಅವರು ಹೇಳಿದರು.

‘ದೇಶದ ನ್ಯಾಯಾಲಯಗಳು, ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆ, ಪತ್ರಿಕೆಗಳು ಎಲ್ಲವನ್ನೂ ನಿಯಂತ್ರಣಕ್ಕೆ ತಂದವು. ಸೆನ್ಸಾರ್ಶಿಪ್ ಎಷ್ಟು ಕಟ್ಟುನಿಟ್ಟಾಗಿತ್ತೆಂದರೆ, ಅನುಮತಿಯಿಲ್ಲದೆ ಏನನ್ನೂ ಪ್ರಕಟಿಸಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಹೇಳಿದರು.

‘ನನಗೆ ನೆನಪಿದೆ, ಪ್ರಸಿದ್ಧ ಗಾಯಕ ಕಿಶೋರ್ ಕುಮಾರ್ ಅವರು ಸರ್ಕಾರವನ್ನ ಹೊಗಳಲು ನಿರಾಕರಿಸಿದಾಗ, ಅವರನ್ನ ನಿಷೇಧಿಸಲಾಯಿತು. ರೇಡಿಯೋದಲ್ಲಿ ಅವರಿಗೆ ಅವಕಾಶ ನೀಡಲಿಲ್ಲ’ ಎಂದು ಪ್ರಧಾನಿ ಹೇಳಿದರು. ಹಲವಾರು ಪ್ರಯತ್ನಗಳು, ಸಾವಿರಾರು ಬಂಧನಗಳು ಮತ್ತು ಲಕ್ಷಾಂತರ ಜನರ ಮೇಲಿನ ದೌರ್ಜನ್ಯಗಳ ಹೊರತಾಗಿಯೂ, ಪ್ರಜಾಪ್ರಭುತ್ವದಲ್ಲಿ ಭಾರತೀಯರ ನಂಬಿಕೆಯನ್ನ ಅಲುಗಾಡಿಸಲು ಸಾಧ್ಯವಾಗಲಿಲ್ಲ ಎಂದು ಪ್ರತಿಪಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು