11:54 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ

30/04/2026, 21:27

ಧಾರವಾಡ(reporterkarnataka.com): ಧಾರವಾಡ ನಗರದ ಹೊರವಲಯದಲ್ಲಿ ಟಿಬೆಟಿಯನ್​ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಧಾರವಾಡ ಹೊರವಲಯದ ಹಳಿಯಾಳ ರಸ್ತೆಯಲ್ಲಿ ತಾಶಿ ಧೋಂಡು (39) ಎಂಬ ಬೌದ್ಧ ಸನ್ಯಾಸಿ ಕೊಲೆಯಾಗಿದೆ. ರಸ್ತೆ ಪಕ್ಕ ಬಿದ್ದಿದ್ದ ಶವ ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮೊದಲು ಅಪಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದಿದ್ದರು, ಬಳಿಕ ಶವ ತಪಾಸಣೆ ನಡೆಸಿದ ಪೊಲೀಸರು ಕೊಲೆ ಎಂದು ಮಾಹಿತಿ ಸಿಕ್ಕಿದೆ.

*ಕೊಲೆಗೆ ಕಾರಣವೇನು?:*
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ತಾಶಿ ಧೋಂಡು (39) ಬರ್ಬರವಾಗಿ ಹತ್ಯೆಯಾಗಿದ್ದಾರೆ. ಕಳೆದ ರಾತ್ರಿ ಕಿಡಿಗೇಡಿಗಳು ಬೇರೆ ಕಡೆ ಕೊಲೆ ಮಾಡಿ ಧಾರವಾಡದ ಹೊರವಲಯದಲ್ಲಿರುವ ಹಳಿಯಾಳ ರಸ್ತೆಯಲ್ಲಿ ಶವವನ್ನು ಎಸೆದು ಹೋಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಇನ್ನು, ರಸ್ತೆ ಪಕ್ಕ ಬಿದ್ದಿದ್ದ ಶವ ನೋಡಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು, ಮೊದಲು ರಸ್ತೆ ಅಪಘಾತದಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿದ್ದರು. ಆದ್ರೆ, ಆದರೆ ಶವವನ್ನು ಆಸ್ಪತ್ರೆಗೆ ರವಾನಿಸಿ ತಪಾಸಣೆ ನಡೆಸಿದ ಬಳಿಕ ಕೊಲೆಯಾಗಿರೋದನ್ನು ದೃಢಪಡಿಸಿದ್ದಾರೆ.
ಸದ್ಯ, ಈ ಘಟನೆ ಬಗ್ಗೆ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು