9:02 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ; ವ್ಯಾಘ್ರ ಸೆರೆಗೆ ಕಾರ್ಯಾಚರಣೆ ಶುರು

28/11/2025, 10:13

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ.
ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ರೈತರು ಪಾರಾಗಿದ್ದಾರೆ. ಗೌಡನಕಟ್ಟೆಯ ರೈತ ಪ್ರಕಾಶ್ ಹಾಗೂ ಸ್ವಾಮಿ ಹುಲಿ ದಾಳಿಯಿಂದ ಪಾರಾಗಿದ್ದಾರೆ. ಹುಲಿ ಘರ್ಜಿಸುತ್ತಾ ದಾಳಿಗೆ ಬಂದಾಗ ಜೋರಾಗಿ ರೈತರು ಕಿರುಚಿಕೊಂಡಿದ್ದಾರೆ.
ಅಕ್ಕ ಪಕ್ಕದಲ್ಲಿದ್ದ ರೈತರು ಸಹ ಜೋರಾಗಿ ಕೂಗಿಕೊಂಡಿದ್ದರಿಂದ ಹುಲಿ ವಾಪಸ್ಸಾಗಿದೆ. ಸದ್ಯ ಹೊಲದಲ್ಲೇ ಹುಲಿ ಮರಿಗಳ ಜೊತೆಗಿರುವ ಸಾಧ್ಯತೆ ಇದೆ. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ ರೈತರು ಘೇರಾವ್ ಹಾಕಿ ಹುಲಿ ಸೆರೆ ಹಿಡಿದ ನಂತರವಷ್ಟೆ ಸ್ಥಳದಿಂದ ಹೋಗವಂತೆ ತಾಕೀತು ಮಾಡಿದ್ದಾರೆ.
ಗ್ರಾಮಸ್ಥರ ಆಕ್ರೋಶಕ್ಕೆ ಮಣಿದ ಅರಣ್ಯಾಧಿಕಾರಿಗಳು ರಾತ್ರಿಯಿಂದ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದು, 4 ಆನೆಗಳೊಂದಿಗೆ ಅರಣ್ಯ ಇಲಾಖೆಯ ಟಾಸ್ಕ್ ಪೋರ್ಸ್ ಸಿಬ್ಬಂದಿ ಕಾರ್ಯಾಚರಣೆ ಯಲ್ಲಿ ತೊಡಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು