10:06 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ‌ ವೇದವ್ಯಾಸ ಕಾಮತ್ ಮನವಿ

22/01/2022, 21:47

ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ – ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. 

ಈ ಕುರಿತು ಹೇಳಿಕೆ ನೀಡಿರುವ‌ ಶಾಸಕ ಕಾಮತ್, ಕರ್ನಾಟಕ ಟೈಲರ್ ಅಸೋಸಿಯೇಷನ್ ನನಗೆ ಸಲ್ಲಿಸಿದ ಮನವಿಯನ್ವಯ ಮುಖ್ಯಮಂತ್ರಿಗಳಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸುವಂತೆ ಮನವಿ ಸಲ್ಲಿಸಿದ್ದೇನೆ. ಭವಿಷ್ಯ ನಿಧಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಆರೋಗ್ಯ ವಿಮೆ ಜಾರಿಗೊಳಿಸುವುದು, ಈ ವರೆಗೆ ಹಣ ಸಂದಾಯ ಮಾಡಿದ 57 ವರ್ಷ ತುಂಬಿದ ಎಲ್ಲಾ ಎನ್.ಪಿ.ಎಸ್ ಲೈಟ್ ಫಲಾನುಭವಿಗಳ ನಿವೃತ್ತಿ ವೇತನ ಘೋಷಿಸುವಂತೆ, ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ನೀಡುವುದು, ಹೊಲಿಗೆ ಕೆಲಸಗಾರರ ಮಕ್ಕಳ ವಿಧ್ಯಾರ್ಥಿ ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ‌ ಸಲ್ಲಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು