1:58 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ‌ ವೇದವ್ಯಾಸ ಕಾಮತ್ ಮನವಿ

22/01/2022, 21:47

ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ – ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. 

ಈ ಕುರಿತು ಹೇಳಿಕೆ ನೀಡಿರುವ‌ ಶಾಸಕ ಕಾಮತ್, ಕರ್ನಾಟಕ ಟೈಲರ್ ಅಸೋಸಿಯೇಷನ್ ನನಗೆ ಸಲ್ಲಿಸಿದ ಮನವಿಯನ್ವಯ ಮುಖ್ಯಮಂತ್ರಿಗಳಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸುವಂತೆ ಮನವಿ ಸಲ್ಲಿಸಿದ್ದೇನೆ. ಭವಿಷ್ಯ ನಿಧಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಆರೋಗ್ಯ ವಿಮೆ ಜಾರಿಗೊಳಿಸುವುದು, ಈ ವರೆಗೆ ಹಣ ಸಂದಾಯ ಮಾಡಿದ 57 ವರ್ಷ ತುಂಬಿದ ಎಲ್ಲಾ ಎನ್.ಪಿ.ಎಸ್ ಲೈಟ್ ಫಲಾನುಭವಿಗಳ ನಿವೃತ್ತಿ ವೇತನ ಘೋಷಿಸುವಂತೆ, ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ನೀಡುವುದು, ಹೊಲಿಗೆ ಕೆಲಸಗಾರರ ಮಕ್ಕಳ ವಿಧ್ಯಾರ್ಥಿ ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ‌ ಸಲ್ಲಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು