6:06 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ ಭಗ್ನ

06/07/2026, 18:05

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ಮೈಸೂರು ದಸರಾ ಅಂಬಾರಿ ಆನೆ, ಕ್ಯಾಪ್ಟನ್ ಅಭಿಮನ್ಯು ದಂತ ಭಗ್ನಗೊಂಡಿರುವ ಘಟನೆ ನಡೆದಿದೆ.
ಸರಗೂರು ಭಾಗದಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ತೊಡಗಿರುವ ಅಭಿಮನ್ಯು, ಕ್ಯಾಂಪ್‌ನಲ್ಲಿ ಮರದ ದಿಮ್ಮಿ ಸಾಗಿಸುವ ವೇಳೆ ಕಠಿಣ ವಸ್ತುವಿಗೆ ದಂತ ಬಡಿದಿದೆ. ಪರಿಣಾಮ ಎಡಭಾಗದ ದಂತದ ತುದಿ ಮುರಿದಿದೆ. ಘಟನೆಯ ಬಳಿಕ ಪಶು ವೈದ್ಯರು ಅಭಿಮನ್ಯುವಿನ ದಂತ ಪರಿಶೀಲಿಸಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಸದ್ಯ ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು ಆರೋಗ್ಯವಾಗಿದ್ದು, ಎಂದಿನಂತೆ ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.
ಒಟ್ಟಿನಲ್ಲಿ ಅಂಬಾರಿ ಆನೆ ಅಭಿಮನ್ಯುವಿನ ದಂತದ ತುದಿ ಮುರಿದಿದ್ದರೂ, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂಬುದು ಸದ್ಯದ ಸಮಾಧಾನಕರ ವಿಷಯವಾಗಿದೆ.
ಈ ವರ್ಷ ಅಂಬಾರಿ ಹೊತ್ತರೆ, ʻಅಭಿಮನ್ಯು ಯುಗʼ ಅಂತ್ಯವಾಗುತ್ತದೆ ಎಂಬುದು ಗಮನಾರ್ಹ. ಮುಂದಿನ ವರ್ಷದಿಂದ ಅಂಬಾರಿ ಹೊರುವ ಜವಾಬ್ದಾರಿ ಮಹೇಂದ್ರ ಅಥವಾ ಧನಂಜಯನ ಹೆಗಲ ಮೇಲೆ ಬೀಳುವ ಸಾಧ್ಯತೆಯಿದೆ ಎನ್ನಲಾಗ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು