2:54 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ

26/11/2025, 12:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಪಿಕ್ ಅಪ್ ವಾಹನದ ಟೈಯರ್ ಸ್ಫೋಟ ಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ರಸ್ತೆ ಮದ್ಯದಲ್ಲೇ ಮಗುಚಿಕೊಂಡು, ಕಾರ್ಮಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರಪೇಟೆ ತಾಲ್ಲೂಕಿನ ನಗರೂರು ಗ್ರಾಮದಲ್ಲಿ ಸಂಭವಿಸಿದೆ. ಅರಕಲಗೂಡು ಶಾಸಕ ಎ. ಮಂಜು ಅವರಿಗೆ ಸೇರಿದ ನಗರೂರು ಎಸ್ಟೇಟ್ ನ ಲೈನ್ ಮನೆಯಿಂದ ಕುಸುಬೂರು ಎಸ್ಟೇಟ್ ಲೈನ್ ಮನೆಗೆ ಕಾರ್ಮಿಕರನ್ನು ಕರೆದೋಯುತ್ತಿದ್ದ ಸಂದರ್ಭ ನಗರೂರು ಬಳಿ ಘಟನೆ ನಡೆದಿದ್ದು, ಹಿಂಭಾಗ ನಿಂತಿದ್ದ ಅಸ್ಸಾಂ ಕಾರ್ಮಿಕ ಬಾಬು ಸೇರಿದಂತೆ ಇತರರು ಕೆಳಗೆ ಬಿದ್ದಿದ್ದಾರೆ, ಘಟನೆಯಿಂದ ಬಾಬುವಿನ ಕಾಲು ಮುರಿತ ಉಂಟಾಗಿದ್ದು, ಚಾಲಕ ರವಿ ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ಘಟನೆಯ ದೃಶ್ಯ ಸಮೀಪದ ವೇ ಬ್ರಿಡ್ಜ್ ಸಿಸಿ ಕ್ಯಾಮೆರದಲ್ಲಿ ಸೆರೆಯಾಗಿದ್ದು, ವಾಹನದಲ್ಲಿ ಇದ್ದವರು ಪವಾಡದ ರೀತಿ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಕಾರ್ಮಿಕರನ್ನು ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು