ಇತ್ತೀಚಿನ ಸುದ್ದಿ
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ: ಮನೆ, ಕೊಟ್ಟಿಗೆ ಹಾನಿ
04/07/2026, 22:13
ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ
info.repoeterkarnataka@gmail.com
ಆರಿದ್ರಾ ಮಳೆಯ ಅಬ್ಬರ ಕಳೆದ ಎರಡು ದಿನಗಳಿಂದ ಜೋರಾಗಿದ್ದು, ಮಳೆಯ ಜೊತೆಗೆ ಶೀತ ಗಾಳಿ ಸಹ ಇದೆ. ಇಂದು ಮಧ್ಯಾಹ್ನ ಭಾರಿ ಗಾಳಿ ಮಳೆಗೆ ಮನೆ ಮತ್ತು ಕೊಟ್ಟಿಗೆ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿರುವ ಘಟನೆ ಹೊದಲ ಅರಳಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಬೃಹತ್ ಮರ ಬಿದ್ದ ಕಾರಣ ಕೊಪ್ಪಲು ಗ್ರಾಮದ ಶ್ರೀನಿವಾಸ್ ಎಂಬುವರ ಮನೆಗೆ ಹಾಗೂ ಕೊಟ್ಟಿಗೆಗೆ ಅಪಾರ ಹಾನಿಯಾಗಿದೆ.
ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.












