8:54 AM Sunday28 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ಭೇಟಿ

26/07/2025, 22:33

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು – ಉಪಾಧ್ಯಕ್ಷರ ದಿಢೀರ್ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ವಿಚಾರವಾಗಿ ಪರಿಶೀಲನೆ ನಡೆಸಿದರು.
ಸೊಪ್ಪುಗುಡ್ಡೆಯಲ್ಲಿರುವ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಸ್ವಚ್ಛತೆ ಹಾಗೂ ಮಕ್ಕಳಿಗೆ ಕುಡಿಯುವನೀರಿನ ವಿಷಯವಾಗಿ ಭೇಟಿ ನೀಡಿ ಕುಡಿಯುವ ನೀರು ಹಾಗೂ ಸ್ನಾನಕ್ಕೆ ಬಿಸಿ ನೀರು ಮೂರು ತಿಂಗಳುಗಳಿಂದ ಬರುತ್ತಿಲ್ಲ ಎಂಬುದಾಗಿ ತಿಳಿದು ಹಿರಿಯ ಹಾಸ್ಟೆಲ್ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಮಲೆನಾಡಿನ ತೀರ್ಥಹಳ್ಳಿ ಭಾಗದಲ್ಲಿ ಮಳೆ ಸಿಕ್ಕಾಪಟ್ಟೆ ಇರುವುದರಿಂದ ಮಕ್ಕಳಿಗೆ ತೊಂದರೆ ಆಗುತ್ತದೆ ಎಂಬ ವಿಷಯ ಪ್ರಸ್ತಾಪ ಮಾಡಿದರು.


ಮಳೆಗಾಲದ ಸಂದರ್ಭದಲ್ಲಿ ತಣ್ಣೀರು ಸ್ನಾನ ಮಾಡಲು ಆಗುವುದಿಲ್ಲ ಹಾಗೆ ಅದಕ್ಕೆ ಬೇಕಾಗುವ ವ್ಯವಸ್ಥೆ ಕೂಡಲೇ ಮಾಡಿಸಬೇಕು ಎಂದು ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ಆದಷ್ಟು ಬೇಗ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ಸೌಲಭ್ಯ ಮಾಡಿಸಿಕೊಡಬೇಕು ಎಂದು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಹಮತ್ ಉಲ್ಲಾ ಆಸಾದಿ ತಿಳಿಸಿದರು.
ಈ ವೇಳೆ ಉಪಾಧ್ಯಕ್ಷರಾದ ಗೀತಾ ರಮೇಶ್, ಆರೋಗ್ಯ ಅಧಿಕಾರ ಜೆ ಪ್ರಕಾಶ್ ಹಾಗೂ ಇತರ ಸಿಬ್ಬಂದಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು