9:37 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ತಿರುಮಲ ಶ್ರೀ ಲಕ್ಷ್ಮಿವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ವಿಶೇಷ ಪೂಜೆ

17/09/2024, 19:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ರಥಬೀದಿ ರಸ್ತೆಯಲ್ಲಿರುವ ತಿರುಮಲ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.
ಬೆಳಗ್ಗೆಯಿಂದಲೇ ತಿರುಪತಿ ತಿರುಮಲೇಶ, ತೀರ್ಥ ರಾಜಾಪುರಾಧೀಶ ಶ್ರೀ ಲಕ್ಷ್ಮೀ ವೆಂಕಟರಮಣ ದೇವರು ಭೂ ವೈಕುಂಠ ತಿರುಪತಿಯಿಂದ ತೀರ್ಥಹಳ್ಳಿಗೆ ಆಗಮಿಸಿದ ಪರ್ವ ಕಾಲ ದಿನವಾದ ಅನಂತ ಚತುರ್ದಶಿಯಂದು ದೇವರಿಗೆ ಗಂಗಾ ಪೂಜೆ, ಕಲಶಸ್ಥಾಪನೆ, ವಿಶೇಷ ಪವಮಾನ ಅಭಿಷೇಕ, ಅನಂತ ವ್ರತಾಚರಣೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿತು.
ಈ ಸಂದರ್ಭದಲ್ಲಿ ಸಮಾಜದ ಮಹಿಳಾ ಬಾಂಧವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮವು ನಡೆಯಿತು. ಇಂದು ಸಂಜೆ ದೀಪ ನಮಸ್ಕಾರ, ಭಜನೆ, ರಂಗಪೂಜೆ, ಸರ್ವಸೇವೆ ಜರುಗಿತು.
ಕಾರ್ಯಕ್ರಮದಲ್ಲಿ ತಿರುಮಲ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಮಾಜದ ಪದಾಧಿಕಾರಿಗಳು, ಸದಸ್ಯರು ಹಾಗೂ ಪಟ್ಟಣದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು