7:01 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ತಿರುಪತಿ: ವೈಕುಂಠ ಏಕಾದಶಿ ದರ್ಶನಕ್ಕೆ ನೂಕು ನುಗ್ಗಲು; ಮಹಿಳೆ ಸಹಿತ 6 ಮಂದಿ ದಾರುಣ ಸಾವು

10/01/2025, 09:56

ತಿರುಪತಿ(reporterkarnataka.com): ವೈಕುಂಠ ಏಕಾದಶಿ ದರ್ಶನದ ಅಂಗವಾಗಿ ವಿಶೇಷ ಟಿಕೆಟ್ ಪಡೆಯುವ ವೇಳೆ ನೂಕು ನುಗ್ಗಲು ಉಂಟಾದ ಪರಿಣಾಮ ಕಾಲ್ತುಳಿತಕ್ಕೊಳಗಾಗಿ 6 ಮಂದಿ ಭಕ್ತರು ಸಾವನ್ನಪ್ಪಿ, ಸುಮಾರು 25 ಮಂದಿ ಗಾಯಗೊಂಡ ಘಟನೆ ತಿರುಪತಿಯಲ್ಲಿ ನಡೆದಿದೆ.
ಟಿಕೆಟ್‌ ಪಡೆದುಕೊಳ್ಳುವ ಪೈಪೋಟಿಯಲ್ಲಿ ಏಕಕಾಲಕ್ಕೆ ಸಾವಿರಾರು ಮಂದಿ ಭಕ್ತರು ಕೌಂಟರ್ ಗೆ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ರಾತ್ರಿ ತಿರುಪತಿ ತಿರುಮಲ ದೇವಾಲಯದಲ್ಲಿ ವೈಕುಂಠ ಏಕಾದಶಿ ವಿಶೇಷ ದರ್ಶನದ ಟಿಕೆಟ್ ಪಡೆಯುವ ಸಂದರ್ಭದ ನೂಕು ನುಗ್ಗಲು ಉಂಟಾಗಿದೆ. ಮೊದಲು ಒಬ್ಬ ಮಹಿಳೆ ಸಹಿತ 6 ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸುಮಾರು 25 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಎಲ್ಲರನ್ನೂ ಸ್ಥಳೀಯ ರುಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು