2:36 AM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ

25/02/2024, 16:23

ಮಂಗಳೂರು(reporterkarnataka.com):ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.
ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರುನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ 6 ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು