2:38 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ತಿರುವನಂತಪುರ-ಕಾಸರಗೋಡು ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರುವರೆಗೆ ವಿಸ್ತರಣೆ

25/02/2024, 16:23

ಮಂಗಳೂರು(reporterkarnataka.com):ತಿರುವನಂತರಪುರ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ ವಿಸ್ತರಣೆ ಮಾಡಲಾಗಿದೆ.
ಇಂದು ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ ವಂದೇ ಭಾರತ್ ರೈಲ್ ನಂ. 20632/20631 ಇನ್ನು ಮುಂದೆ ತಿರುವನಂತಪುರ-ಮಂಗಳೂರುನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಿಗ್ಗೆ 06.15ಕ್ಕೆ ಹೊರಟು ಅಪರಾಹ್ನ 3.05ಕ್ಕೆ ತಿರುವನಂತಪುರವನ್ನು ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4.05 ಕ್ಕೆ ಬಿಟ್ಟು ಮಂಗಳೂರನ್ನು ರಾತ್ರಿ 12.40ಕ್ಕೆ ತಲುಪಲಿದೆ. ಬುಧವಾರವನ್ನು ಹೊರತು ಪಡಿಸಿ ವಾರ 6 ದಿನಗಳಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರು ವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು