12:27 AM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

TN BJP | ಎಐಎಡಿಎಂಕೆ ಒತ್ತಡ?: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

04/04/2025, 18:02

ಚೆನ್ನೈ(reporterkarnataka.com): ರಾಜಕಾರಣಿಯಾಗಿ ಪರಿವರ್ತನೆಗೊಂಡ ಮಾಜಿ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಶುಕ್ರವಾರ ಕೊಯಮತ್ತೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ. ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.
ಬಿಜೆಪಿ ಬೆಳವಣಿಗೆಗಾಗಿ ಅನೇಕ ನಾಯಕರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ನಾನೂ ಸಹ ಬಿಜೆಪಿಗೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ ಅಂತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.
ನಮ್ಮ ಪಕ್ಷ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಬೇರೆ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದರೆ, ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ತಿಳಿಸಿದರು.
2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎಂಬ ಆರೋಪವಿತ್ತು. ಇದೀಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ಚುರುಕುಗೊಂಡಿದೆ. ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ
ಎಐಎಡಿಎಂಕೆ ಒತ್ರಡ ಹೇರುತ್ತಿರುವ ಹಿನ್ನೆಲೆಯಲ್ಲಿ
ಅಣ್ಣಾಮಲೈ ಅವರಿಂದ ರಾಜೀನಾಮೆ ಕೊಡಿಸಲಾಗಿದೆ ಎನ್ನಲಾಗಿದೆ.
ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಖಡಕ್ ಪೊಲೀಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದರು. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು