2:36 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

TN BJP | ಎಐಎಡಿಎಂಕೆ ಒತ್ತಡ?: ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ

04/04/2025, 18:02

ಚೆನ್ನೈ(reporterkarnataka.com): ರಾಜಕಾರಣಿಯಾಗಿ ಪರಿವರ್ತನೆಗೊಂಡ ಮಾಜಿ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಅವರು
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಶುಕ್ರವಾರ ಕೊಯಮತ್ತೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ನಾನು ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿಲ್ಲ. ಬಿಜೆಪಿ ಅಧ್ಯಕ್ಷರ ಹುದ್ದೆಗೆ ನಾನು ಸ್ಪರ್ಧೆ ಮಾಡಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ ಎಂದಿದ್ದಾರೆ.
ಬಿಜೆಪಿ ಬೆಳವಣಿಗೆಗಾಗಿ ಅನೇಕ ನಾಯಕರು ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದಾರೆ. ನಾನೂ ಸಹ ಬಿಜೆಪಿಗೆ ಒಳ್ಳೆಯದನ್ನೇ ಬಯಸುತ್ತೇನೆ. ಹಾಗಾಗಿ ಈ ಬಾರಿ ನಾನು ಪಕ್ಷದ ಅಧ್ಯಕ್ಷ ಹುದ್ದೆಯ ರೇಸ್‌ನಲ್ಲಿ ಇಲ್ಲ. ನಾವೆಲ್ಲರೂ ಒಟ್ಟಾಗಿ ಸೇರಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡಲ್ಲ ಅಂತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಹೇಳಿದರು.
ನಮ್ಮ ಪಕ್ಷ ಇತರ ಪಕ್ಷಗಳಿಗಿಂತ ಭಿನ್ನವಾಗಿದೆ. ಬೇರೆ ಪಕ್ಷಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 50 ಜನ ನಾಮಪತ್ರ ಸಲ್ಲಿಸುತ್ತಾರೆ. ಆದರೆ, ನಮ್ಮಲ್ಲಿ ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಅಂತ ಅಣ್ಣಾಮಲೈ ತಿಳಿಸಿದರು.
2023ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎಂಬ ಆರೋಪವಿತ್ತು. ಇದೀಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ಚುರುಕುಗೊಂಡಿದೆ. ಅಣ್ಣಾಮಲೈ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ
ಎಐಎಡಿಎಂಕೆ ಒತ್ರಡ ಹೇರುತ್ತಿರುವ ಹಿನ್ನೆಲೆಯಲ್ಲಿ
ಅಣ್ಣಾಮಲೈ ಅವರಿಂದ ರಾಜೀನಾಮೆ ಕೊಡಿಸಲಾಗಿದೆ ಎನ್ನಲಾಗಿದೆ.
ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಖಡಕ್ ಪೊಲೀಸ್ ಅಧಿಕಾರಿ ಎಂದೇ ಖ್ಯಾತರಾಗಿದ್ದರು. ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಸ್ ಪಿಯಾಗಿ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು