9:56 AM Tuesday17 - March 2026
ಬ್ರೇಕಿಂಗ್ ನ್ಯೂಸ್
Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ಇತ್ತೀಚಿನ ಸುದ್ದಿ

ತೊಗರಿ ಖರೀದಿ ನೊಂದಣಿ ಮಾರ್ಚ್ ತಿಂಗಳಾಂತ್ಯದವರೆಗೆ ವಿಸ್ತರಣೆ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

19/03/2025, 16:54

ಬೆಂಗಳೂರು(reporterkarnataka.com): ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿಯ ನೋಂದಣಿ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಇದುವರೆಗೆ ನೋಂದಣಿ ಮಾಡಿಕೊಳ್ಳದ ರೈತರು ತಕ್ಷಣ ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್ಗೆ 7,550 ರೂ. ಬೆಲೆ ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಕೂಡ 450 ರೂ. ಪ್ರೋತ್ಸಾಹ ಧನ ಘೋಷಣೆ ಮಾಡಿತ್ತು. ಕೆಲವು ಕಡೆ ರಾಜ್ಯ ಸರ್ಕಾರದ ಪ್ರೋತ್ಸಾಹ ಧನ ಬಿಲ್ನಲ್ಲಿ ಸೇರ್ಪಡೆಯಾಗುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಇದನ್ನು ಸರಿಪಡಿಸಲಾಗಿದೆ. ರೈತರಿಗೆ ಪ್ರತಿ ಕ್ವಿಂಟಲ್ಗೆ ರೂ 8,000 ಪಾವತಿ ಮಾಡಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು