2:19 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕರಾವಳಿಯ ಜೀವ ನದಿ ನೇತ್ರಾಳ ಒಡಲಿಗೆ ಶೌಚಾಲಯದ ತ್ಯಾಜ್ಯ!: ಕ್ಯಾರೇ ಮಾಡ್ತಿಲ್ಲ ಸ್ಥಳೀಯಾಡಳಿತ!!

29/06/2026, 20:20

ವಿಶೇಷ ವರದಿ ಮಂಗಳೂರು

info.reporterkarnataka@gmail.com

ದಕ್ಷಿಣ ಕನ್ನಡ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಈ ಬಗ್ಗೆ ನದಿಯ ಒಡಲಿನಲ್ಲಿ ವಸತಿ ಸಮುಚ್ಚಯದಿಂದ ಹರಿದು ಬಂದು ಸಂಗ್ರಹವಾಗಿರುವ ಮಲಿನ ನೀರು ಹರಿಯುವ ನದಿಯನ್ನು ಸೇರುತ್ತಿರುವ ದೃಶ್ಯವನ್ನು ಸೆರೆ ಹಿಡಿದಿರುವ ಉಪ್ಪಿನಂಗಡಿ ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್ ಜಿಲ್ಲೆಯ ಜೀವ ನದಿಯನ್ನು ಈ ಪ್ರಮಾಣದಲ್ಲಿ ಕೆಡಿಸುತ್ತಿರುವುದು ನಾಗರಿಕ ಸಮಾಜಕ್ಕೆ ಶೋಭೆ ಎನಿಸುವುದೇ ಎಂದು ಪ್ರಶ್ನಿಸಿದ್ದಾರೆ.

*ಶೌಚಾಲಯದ ತ್ಯಾಜ್ಯ ವಿಲೇವಾರಿ:*
ಈ ಬಗ್ಗೆ ವಸತಿ ಸಮುಚ್ಚಯದಲ್ಲಿನ ನಿವಾಸಿಯೊಬ್ಬಬ್ಬರು ಪ್ರತಿಕ್ರಿಯಿಸಿ, ಶೌಚಾಲಯದ ತ್ಯಾಜ್ಯ ವಿಲೇವಾರಿ ವೈಜ್ಞಾನಿಕವಾಗಿ ನಿರ್ವಹಿಸುವ ಅವಕಾಶವಿದ್ದರೂ, ಅದನ್ನು ಮಾಡದೆ ರಾತ್ರಿ ಹೊತ್ತು ನೇರವಾಗಿ ನದಿಗೆ ಬಿಡುವುದರಿಂದ ಪರಿಸರವಿಡೀ ದುರ್ನಾತ ಪಸಹರಿಸುತ್ತದೆ. ಮನೆಗೆ ಬಂದ ಅತಿಥಿಗಳು ದುರ್ನಾತ ಸಹಿಸಲಾಗದೆ ಮನೆಯಿಂದ ಹೊರಟ ಘಟನಾವಳಿಗಳು ನಡೆದು ಮುಜುಗರ ತರಿಸುತ್ತಿದೆ. ಆಡಳಿತ ವ್ಯವಸ್ಥೆ ಮೌನವಾಗಿದೆ ಎಂಬ ಅಳಲನ್ನು ತೋಡಿಕೊಂಡಿದ್ದಾರೆ.
ನದಿಗೆ ಶೌಚಾಲಯದ ತ್ಯಾಜ್ಯ ಬಿಡುತ್ತಿರುವ ಬಗ್ಗೆ, ರಾತ್ರಿ ಹೊತ್ತು ನದಿ ಪಾತ್ರದುದ್ದಕ್ಕೂ ಸಹಿಸಲಸಾಧ್ಯವಾದ ದುರ್ವಾಸನೆ ಪಸಹರಿಸುತ್ತಿರುವ ಬಗ್ಗೆ ಶಾಸಕರಲ್ಲಿ ಸಾರ್ವಜನಿಕರು ದೂರಿಕೊಂಡಾಗ, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಾದರೂ, ಅದ್ಯಾವುದೂ ಪಾಲನೆಯಾಗುತ್ತಿಲ್ಲ ಎನ್ನುವುದಕ್ಕೆ ಈ ದೃಶ್ಯವೇ ಸಾಕ್ಷಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು