8:36 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು…

ಇತ್ತೀಚಿನ ಸುದ್ದಿ

ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು

11/05/2022, 20:14

ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ. ಟೊಮೇಟೊ ಜ್ವರ ಇದೊಂದು ಅಪರೂಪದ ವೈರಲ್ ಸೋಂಕು ಆಗಿದೆ. ಈ ಜ್ವರದಲ್ಲಿ ಬಳಲುತ್ತಿರುವ ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು