4:00 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು

11/05/2022, 20:14

ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ. ಟೊಮೇಟೊ ಜ್ವರ ಇದೊಂದು ಅಪರೂಪದ ವೈರಲ್ ಸೋಂಕು ಆಗಿದೆ. ಈ ಜ್ವರದಲ್ಲಿ ಬಳಲುತ್ತಿರುವ ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು