7:58 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಟೊಮ್ಯಾಟೋ ಜ್ವರ ಬಾಧೆ: ಕೇರಳದೆಲ್ಲೆಡೆ ಆತಂಕ; 5 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಂಕು

11/05/2022, 20:14

ತಿರುವನಂತಪುರ(reporterkarnataka.com):nಕೊರೊನಾ ಎಂಬ ಮಹಾಮಾರಿಯ ಆರ್ಭಟದ ಮಧ್ಯೆಯೇ ಕೇರಳದಲ್ಲಿ ಹೊಸ ಸೋಂಕುವೊಂದು ಜನರಲ್ಲಿ ಭೀತಿಯುಂಟು ಮಾಡಿದೆ.ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಎಲ್ಲರ ಆತಂಕಕ್ಕೆ ಕಾರಣವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಸೋಂಕು ತಗುಲಿದವರೆಲ್ಲ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದು, ವಾಸ್ತವ ಸ್ಥಿತಿಯ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಗಾ ವಹಿಸಿದೆ. ಟೊಮೇಟೊ ಜ್ವರ ಇದೊಂದು ಅಪರೂಪದ ವೈರಲ್ ಸೋಂಕು ಆಗಿದೆ. ಈ ಜ್ವರದಲ್ಲಿ ಬಳಲುತ್ತಿರುವ ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿವೆ. ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿದೆ. ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು