3:24 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಹಜರತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ನಾಳೆ ಗಂಧದ ಮಹೋತ್ಸವ; ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

21/02/2025, 14:48

ಮೋಹನ್ ನಂಜನಗೂಡು ಮೈಸೂರು

info.reporterkarnata@gmail.com

ತಲತಲಾಂತರಗಳಿಂದ ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಇತಿಹಾಸ ಪ್ರಸಿದ್ಧ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ಗಂಧದ ಮಹೋತ್ಸವದ ಹಿನ್ನೆಲೆಯಲ್ಲಿ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬಿಬಿ ಮಾ ದರ್ಗಾದಲ್ಲಿ ಇದೇ ಫೆ.22 ರಂದು ಗಂಧದ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ದರ್ಗಾದ ಗುರುಗಳಾದ ಕೆ.ಆರ್ ಹುಸೇನ್ ಧರ್ಮಿ ರೇಂಜಲಾಡಿ ತಿಳಿಸಿದ್ದಾರೆ.
ಅಂದು ಶನಿವಾರ ಸಂಜೆ ವಿವಿಧ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಜಾಮಿಯಾ ಮಸೀದಿಯಿಂದ ಸಂಜೆ 5:00 ಗಂಟೆಗೆ ಪಲ್ಲಕ್ಕಿ ಉತ್ಸವದಲ್ಲಿ ಗಂಧದ ಮಹೋತ್ಸವವು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಡುತ್ತದೆ.
ನಂತರ ದರ್ಗಾಗೆ ಹೋಗಿ ವಿಠಲಪುರದ ಗುರುಗಳಾದ ಹಜರತ್ ಸೈಯದ್ ಷಾ ಮಹಮ್ಮದ್, ಉಸ್ಮಾನ್ ಪಾಷಾ ಖಾದ್ರಿ ತಂಡದ ವತಿಯಿಂದ ಗಂಧವನ್ನು ಸಮರ್ಪಿಸಲಾಗುವುದು.
ವಿವಿಧ ಧಾರ್ಮಿಕ ಗುರುಗಳಿಂದ ಪ್ರವಚನವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಸಿದ್ಧ ಕವಾಲಿ ತಂಡದಿಂದ ನೃತ್ಯ ಪ್ರದರ್ಶನವಿದೆ ಎಂದು ಹಜರತ್ ಸೈದಾನಿ ಬೀಬಿ ಮಾ ದರ್ಗಾದ ಆಡಳಿತ ಮಂಡಳಿ ತಿಳಿಸಿದೆ.


ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಮತ್ತು ರಸೂಲ್ ಪಗವಾಲ ಪರಿಶೀಲನೆ ನಡೆಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಮಿಟಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು