8:12 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಜರತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ನಾಳೆ ಗಂಧದ ಮಹೋತ್ಸವ; ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

21/02/2025, 14:48

ಮೋಹನ್ ನಂಜನಗೂಡು ಮೈಸೂರು

info.reporterkarnata@gmail.com

ತಲತಲಾಂತರಗಳಿಂದ ಹಿಂದು ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಗಿರುವ ಇತಿಹಾಸ ಪ್ರಸಿದ್ಧ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬೀಬಿ ಮಾ ದರ್ಗಾದಲ್ಲಿ ಗಂಧದ ಮಹೋತ್ಸವದ ಹಿನ್ನೆಲೆಯಲ್ಲಿ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಬೆಳಲೆ ಗ್ರಾಮದ ಹಜರಾತ್ ಸೈದಾನಿ ಬಿಬಿ ಮಾ ದರ್ಗಾದಲ್ಲಿ ಇದೇ ಫೆ.22 ರಂದು ಗಂಧದ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ ಎಂದು ದರ್ಗಾದ ಗುರುಗಳಾದ ಕೆ.ಆರ್ ಹುಸೇನ್ ಧರ್ಮಿ ರೇಂಜಲಾಡಿ ತಿಳಿಸಿದ್ದಾರೆ.
ಅಂದು ಶನಿವಾರ ಸಂಜೆ ವಿವಿಧ ಧಾರ್ಮಿಕ ವಿಧಿ ವಿಧಾನ ಗಳೊಂದಿಗೆ ಜಾಮಿಯಾ ಮಸೀದಿಯಿಂದ ಸಂಜೆ 5:00 ಗಂಟೆಗೆ ಪಲ್ಲಕ್ಕಿ ಉತ್ಸವದಲ್ಲಿ ಗಂಧದ ಮಹೋತ್ಸವವು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಡುತ್ತದೆ.
ನಂತರ ದರ್ಗಾಗೆ ಹೋಗಿ ವಿಠಲಪುರದ ಗುರುಗಳಾದ ಹಜರತ್ ಸೈಯದ್ ಷಾ ಮಹಮ್ಮದ್, ಉಸ್ಮಾನ್ ಪಾಷಾ ಖಾದ್ರಿ ತಂಡದ ವತಿಯಿಂದ ಗಂಧವನ್ನು ಸಮರ್ಪಿಸಲಾಗುವುದು.
ವಿವಿಧ ಧಾರ್ಮಿಕ ಗುರುಗಳಿಂದ ಪ್ರವಚನವನ್ನು ಹಮ್ಮಿಕೊಳ್ಳಲಾಗಿದ್ದು, ಪ್ರಸಿದ್ಧ ಕವಾಲಿ ತಂಡದಿಂದ ನೃತ್ಯ ಪ್ರದರ್ಶನವಿದೆ ಎಂದು ಹಜರತ್ ಸೈದಾನಿ ಬೀಬಿ ಮಾ ದರ್ಗಾದ ಆಡಳಿತ ಮಂಡಳಿ ತಿಳಿಸಿದೆ.


ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಮತ್ತು ರಸೂಲ್ ಪಗವಾಲ ಪರಿಶೀಲನೆ ನಡೆಸಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕಮಿಟಿಯ ಅಧ್ಯಕ್ಷರು ಮತ್ತು ಸದಸ್ಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು