6:19 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ತೋಟ ಬೆಂಗ್ರೆ: ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಯುವ ವ್ಯಾಪಾರಿಯ ಶವ ಪತ್ತೆ

31/10/2023, 19:30

ಮಂಗಳೂರು/ಚಿಕ್ಕಮಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಾಪಾರಿಯ ಮೃತದೇಹ ಪತ್ತೆಯಾಗಿದೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಅವರು ಸೋಮವಾರ ನೇತ್ರಾವತಿ ನದಿಗೆ ಹಾರಿದ್ದರು. ತಕ್ಷಣ ಅವರ ಶೋಧ ಕಾರ್ಯ ಆರಂಭವಾಗಿತ್ತು. ಮುಳುಗು ತಜ್ಞರು, ಈಜುಗಾರರ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಇದೀಗ ಪ್ರಸನ್ನ ಅವರ ಮೃತದೇಹ ತೋಟಬೆಂಗ್ರೆ ಬಳಿ ಪತ್ತೆಯಾಗಿದೆ.
ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ತೊಕ್ಕೊಟ್ಟು ನೇತ್ರಾವತಿ ಸೇತುವೆ ಸುದ್ದಿ ಮಾಡಿತ್ತು. ನಂತರ ಹಲವು ಮಂದಿ ಇಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೇತ್ರಾವತಿ ಸೇತುವೆ ಸೂಸೈಡ್ ಸ್ಪಾಟ್ ಆಗುವುದನ್ನು ತಪ್ಪಿಸಲು ಇಲ್ಲಿ ತಂತಿಬೇಲಿ ಹಾಕಿ ನೆಟ್ ಹಾಕಲಾಯಿತು.
ಪ್ರಸನ್ನ ಅವರು ಸೋಮವಾರ ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸೇತುವೆ ಬಳಿ ಕಾರು ನಿಲ್ಲಿಸಿ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಮೂಲದ ಪ್ರಸನ್ನಗೌಡ ಶವ ಕೊನೆಗೂ ಪತ್ತೆಯಾಗಿದೆ. ಅವರು ನದಿಗೆ ಹಾರಿದ ಸರಿಸುಮಾರು 24 ಗಂಟೆಗಳ ನಂತರ ಶವವನ್ನು ನದಿಯಿಂದ ಹೊರತೆಗೆಯಲಾಗಿದೆ.
ನಿನ್ನೆ ಮಧ್ಯಾಹ್ನದಿಂದ ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ನಿನ್ನೆ ಸಂಜೆ ಅದೇ ಸ್ಥಳದಲ್ಲಿ ಒಂದು ಶವ ಸಿಕ್ಕಿತ್ತು ಅದನ್ನು ಪ್ರಸನ್ನ ಗೌಡ ಶವ ಎಂದೇ ಭಾವಿಸಲಾಗಿತ್ತು. ಆದರೆ ಕುಟುಂಬ ಸದಸ್ಯರು ಪರಿಶೀಲಿಸಿದ ನಂತರ ಅದು ಬೇರೆ ಯಾರದ್ದೋ ಶವ ಎಂದು ತಿಳಿದುಬಂದಿತ್ತು.
ನಿರಂತರ ಹುಡುಕಾಟದ ನಂತರ ಇಂದು ಮಧ್ಯಾಹ್ನದ ಹೊತ್ತಿಗೆ ಪ್ರಸನ್ನಗೌಡ ಅವರ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಹುಟ್ಟೂರು ಚಿಕ್ಕಮಗಳೂರು ಸಮೀಪದ ಬೈರಾಪುರ ಗ್ರಾಮಕ್ಕೆ ಮೃತದೇಹವನ್ನು ತರಲಾಗುತ್ತದೆ ಎಂದು ತಿಳಿದು ಬಂದಿದೆ.


ಪ್ರಸನ್ನ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ತರಕಾರಿ ಸೊಪ್ಪು ಹೋಲ್ ಸೇಲ್ ವ್ಯಾಪಾರ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ವ್ಯಾಪಾರದ ಹಣ ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ಹಾಗೂ ಡಿ.ಎಲ್. ವಿಳಾಸದ ಗುರುತಿನ ಮೇಲೆ ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿತ್ತು.
ಪ್ರಸನ್ನ ಗೌಡ ವಿವಾಹಿತರಾಗಿದ್ದು ಪತ್ನಿ, ಇಬ್ಬರು ಚಿಕ್ಕ ಹೆಣ್ಣುಮಕ್ಕಳು, ತಂದೆ ತಾಯಿಯನ್ನು ಅಗಲಿದ್ದಾರೆ. ಪ್ರಸನ್ನ ಗೌಡರ ಸಾವಿನಿಂದ ಅವರ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.
2019 ರಲ್ಲಿ ಕಾಫಿ ಡೇ ಮಾಲೀಕರಾದ ವಿ.ಜಿ.ಸಿದ್ದಾರ್ಥ ಹೆಗ್ಡೆಯವರು ನದಿಗೆ ಹಾರಿದ್ದ ಸ್ಥಳದಲ್ಲಿಯೇ ಇವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಸನ್ನ ಅವರು ನದಿಗೆ ಹಾರಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು