2:01 PM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ತೋಟ ಬೆಂಗ್ರೆ: ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಯುವ ವ್ಯಾಪಾರಿಯ ಶವ ಪತ್ತೆ

31/10/2023, 19:30

ಮಂಗಳೂರು/ಚಿಕ್ಕಮಗಳೂರು(reporterkarnataka.com): ನಗರದ ಹೊರವಲಯದ ತೊಕ್ಕೊಟ್ಟು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಾಪಾರಿಯ ಮೃತದೇಹ ಪತ್ತೆಯಾಗಿದೆ.
ಚಿಕ್ಕಮಗಳೂರಿನ ಗೋಕುಲ್ ಫಾರ್ಮ್‌ ನಿವಾಸಿ ಪ್ರಸನ್ನ (37) ಅವರು ಸೋಮವಾರ ನೇತ್ರಾವತಿ ನದಿಗೆ ಹಾರಿದ್ದರು. ತಕ್ಷಣ ಅವರ ಶೋಧ ಕಾರ್ಯ ಆರಂಭವಾಗಿತ್ತು. ಮುಳುಗು ತಜ್ಞರು, ಈಜುಗಾರರ ತಂಡ ಶೋಧ ಕಾರ್ಯಾಚರಣೆ ನಡೆಸಿತ್ತು. ಇದೀಗ ಪ್ರಸನ್ನ ಅವರ ಮೃತದೇಹ ತೋಟಬೆಂಗ್ರೆ ಬಳಿ ಪತ್ತೆಯಾಗಿದೆ.
ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ತೊಕ್ಕೊಟ್ಟು ನೇತ್ರಾವತಿ ಸೇತುವೆ ಸುದ್ದಿ ಮಾಡಿತ್ತು. ನಂತರ ಹಲವು ಮಂದಿ ಇಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನೇತ್ರಾವತಿ ಸೇತುವೆ ಸೂಸೈಡ್ ಸ್ಪಾಟ್ ಆಗುವುದನ್ನು ತಪ್ಪಿಸಲು ಇಲ್ಲಿ ತಂತಿಬೇಲಿ ಹಾಕಿ ನೆಟ್ ಹಾಕಲಾಯಿತು.
ಪ್ರಸನ್ನ ಅವರು ಸೋಮವಾರ ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಸೇತುವೆ ಬಳಿ ಕಾರು ನಿಲ್ಲಿಸಿ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಮೂಲದ ಪ್ರಸನ್ನಗೌಡ ಶವ ಕೊನೆಗೂ ಪತ್ತೆಯಾಗಿದೆ. ಅವರು ನದಿಗೆ ಹಾರಿದ ಸರಿಸುಮಾರು 24 ಗಂಟೆಗಳ ನಂತರ ಶವವನ್ನು ನದಿಯಿಂದ ಹೊರತೆಗೆಯಲಾಗಿದೆ.
ನಿನ್ನೆ ಮಧ್ಯಾಹ್ನದಿಂದ ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ನಿನ್ನೆ ಸಂಜೆ ಅದೇ ಸ್ಥಳದಲ್ಲಿ ಒಂದು ಶವ ಸಿಕ್ಕಿತ್ತು ಅದನ್ನು ಪ್ರಸನ್ನ ಗೌಡ ಶವ ಎಂದೇ ಭಾವಿಸಲಾಗಿತ್ತು. ಆದರೆ ಕುಟುಂಬ ಸದಸ್ಯರು ಪರಿಶೀಲಿಸಿದ ನಂತರ ಅದು ಬೇರೆ ಯಾರದ್ದೋ ಶವ ಎಂದು ತಿಳಿದುಬಂದಿತ್ತು.
ನಿರಂತರ ಹುಡುಕಾಟದ ನಂತರ ಇಂದು ಮಧ್ಯಾಹ್ನದ ಹೊತ್ತಿಗೆ ಪ್ರಸನ್ನಗೌಡ ಅವರ ಶವ ಪತ್ತೆಯಾಗಿದೆ. ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಸ್ಥಳೀಯ ಮೀನುಗಾರರು, ಮುಳುಗು ತಜ್ಞರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಹುಟ್ಟೂರು ಚಿಕ್ಕಮಗಳೂರು ಸಮೀಪದ ಬೈರಾಪುರ ಗ್ರಾಮಕ್ಕೆ ಮೃತದೇಹವನ್ನು ತರಲಾಗುತ್ತದೆ ಎಂದು ತಿಳಿದು ಬಂದಿದೆ.


ಪ್ರಸನ್ನ ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ತರಕಾರಿ ಸೊಪ್ಪು ಹೋಲ್ ಸೇಲ್ ವ್ಯಾಪಾರ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ವ್ಯಾಪಾರದ ಹಣ ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ಹಾಗೂ ಡಿ.ಎಲ್. ವಿಳಾಸದ ಗುರುತಿನ ಮೇಲೆ ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿತ್ತು.
ಪ್ರಸನ್ನ ಗೌಡ ವಿವಾಹಿತರಾಗಿದ್ದು ಪತ್ನಿ, ಇಬ್ಬರು ಚಿಕ್ಕ ಹೆಣ್ಣುಮಕ್ಕಳು, ತಂದೆ ತಾಯಿಯನ್ನು ಅಗಲಿದ್ದಾರೆ. ಪ್ರಸನ್ನ ಗೌಡರ ಸಾವಿನಿಂದ ಅವರ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ.
2019 ರಲ್ಲಿ ಕಾಫಿ ಡೇ ಮಾಲೀಕರಾದ ವಿ.ಜಿ.ಸಿದ್ದಾರ್ಥ ಹೆಗ್ಡೆಯವರು ನದಿಗೆ ಹಾರಿದ್ದ ಸ್ಥಳದಲ್ಲಿಯೇ ಇವರು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಸನ್ನ ಅವರು ನದಿಗೆ ಹಾರಿರುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು