4:06 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್

06/03/2025, 23:20

ಬೆಂಗಳೂರು (reporterkarnataka.com) :ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಬರುವ ಆರ್ಥಿಕ ವರ್ಷದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್. ಕೆ. ಪಾಟೀಲ್ ಹೇಳಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಕುಶಾಲಪ್ಪ ಎಂ.ಪಿ (ಸುಜಾ) ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, 2013-14ನೇ ಸಾಲಿನಲ್ಲಿ ಕೊಡವ ಹೆರಿಟೇಜ್ ಕೇಂದ್ರದ ಕಾಮಗಾರಿಯನ್ನು 268.04 ಲಕ್ಷಗಳ ಅಂದಾಜು ವೆಚ್ಚದಲ್ಲಿ ಪ್ರಾರಂಭಿಸಲಾಯಿತು. ನಂತರ ಈ ಕಾಮಗಾರಿಯನ್ನು ರೂ 330.45 ಲಕ್ಷಗಳಲ್ಲಿ ಮುಗಿಸಲು ಆಡಳಿತಾತ್ಮಕ ಅನುಮೋದನೆಯನ್ನು ಮಡೆದುಕೊಂಡು 6 ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ ಇನ್ನೂ ಈ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಸಿ.ಎಸ್.ಆರ್. ಅನುದಾನದಡಿಯಲ್ಲಿ ಕಾಮಗಾರಿಯನ್ನು ಮಾಡಲು ಕೊಡಗು ಜಿಲ್ಲಾಧಿಕಾರಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ಕೋರಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳು ಹಾಗೂ ಕೊಡಗು ಜಿಲ್ಲೆಯ ಮಡಕೇರಿಯ ಅಧ್ಯಕ್ಷರು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಅವರು ಕಾಮಗಾರಿಯನ್ನು ಸಿಎಸ್.ಆರ್. ಅನುದಾನದಲ್ಲಿ ಕೈಗೊಂಡು ನಿರ್ವಹಣೆ ಮಾಡಲು ಕಷ್ಟಸಾಧ್ಯ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸದರಿ ಕಾಮಗಾರಿಯನ್ನು ಪಿ.ಪಿ.ಪಿ ಮಾದರಿಯಲ್ಲಿ ಪೂರ್ಣಗೊಳಿಸಿ ನಿರ್ವಹಣೆ ಹಾಗೂ ಕಾರ್ಯಚರಣೆ ಮಾಡುವ ಬಗ್ಗೆ ಮಾರ್ಗದರ್ಶನ ಕೋರಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಿಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು