12:19 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪ್ರವಾಸೋದ್ಯಮ | ಮಂಗಳೂರಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ – ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಭೇಟಿ

21/04/2026, 14:17

ಮಂಗಳೂರು (reporterkarnataka.com): ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌ ಸ್ಪೋರ್ಟ್ಸ್‌ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು.ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳೊಂದಿಗೆ ಕ್ರೀಡಾ ಪಠ್ಯಕ್ರಮ ಅಭಿವೃದ್ಧಿಗಾಗಿ ಸಹಭಾಗಿತ್ವ ಹೊಂದುವ ಕುರಿತು ಕೂಡ ಇದೇವೇಳೆ ಚರ್ಚಿಸಲಾಯಿತು. ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಕಾನ್ಸಲ್ ಜನರಲ್ ಅವರು ಸಂಸದ ಕ್ಯಾ. ಚೌಟ ಅವರಿಗೆ ಸ್ಮರಣಿಕೆಯಾಗಿ ಲೆದರ್ ಬಾಲ್ ಅನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು.ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು ಇಂತಹ ಉಪಕ್ರಮಗಳು ಎರಡು ದೇಶಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದಲ್ಲದೆ ನಮ್ಮ ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ಮತ್ತು ಮಾನ್ಯತೆಯನ್ನು ಒದಗಿಸುವ ಮೂಲಕ ಹೊಸ ಹಾದಿ ತೆರೆಯಲಿವೆ. ಅಲ್ಲದೆ ಇದು ಆರ್ಥಿಕ ಪ್ರಗತಿಯ ಜೊತೆಗೆ ‘ವಿಕಸಿತ ಭಾರತ’ದ ದೃಷ್ಟಿಕೋನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು