1:05 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ಕಲಬುರಗಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆಗೆ ಪ್ರವಾಸಿ ಮಿತ್ರ: ತರಬೇತಿ ಪಡೆದ ಗೃಹರಕ್ಷಕ ತಂಡ

04/07/2025, 12:55

ಕಲಬುರಗಿ(reporterkarnataka.com): ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಪ್ರವಾಸಿ ತಾಣಗಳ ಸಂರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 2015ನೇ ಸಾಲಿನಲ್ಲಿ ತರಬೇತಿ ಪಡೆದ ಗೃಹರಕ್ಷಕ ಸಿಬ್ಬಂದಿಗಳನ್ನು ಜಿಲ್ಲೆಯ ಪ್ರವಾಸಿತಾಣಗಳಲ್ಲಿ ಪ್ರವಾಸಿ ಮಿತ್ರ ( ಟೂರಿಸ್ಟ್ ಪೊಲೀಸ) ಹೆಸರಿನಡಿ ಯೋಜನೆಯನ್ನು ಕಲಬುರಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದೆ.

ಕಲಬುರಗಿ ಜಿಲ್ಲೆಯ ಪ್ರವಾಸಿ ತಾಣಗಳಾದ ಶ್ರೀಶರಣಬಸವೇಶ್ವರ ದೇವಸ್ಥಾನ, ಬುದ್ದ ವಿಹಾರ, ಕಲಬುರಗಿ ಕೋಟೆ, ಪ್ರಾಣಿ ಸಂಗ್ರಹಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ಘತ್ತರಗಿ ಭಾಗ್ಯವಂತಿ ದೇವಸ್ಥಾನ, ಗಾಣಗಾಪೂರ ದತ್ತ ದೇವಸ್ಥಾನ, ಲಾಡ್ಲೆ ಮಶಾಕ ದರ್ಗಾ, ಮಳಖೇಡ ಕೋಟೆ, ಚಂದ್ರಂಪಳ್ಳಿ ಜಲಾಶಯ ಹೀಗೆ ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಲಾದ ಕಲಬುರಗಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಿತ್ರ ಯೋಜನೆಯಡಿ ತರಬೇತಿ ಪಡೆದ ಜಿಲ್ಲೆಯ ಒಟ್ಟು 48 ಪ್ರವಾಸಿ ಮಿತ್ರ ಸಿಬ್ಬಂದಿಗಳನ್ನು ಹಂತ ಹಂತವಾಗಿ ದೇಶೀಯ ಹಾಗೂ ವಿದೇಶೀಯ ಪ್ರವಾಸಿಗರ ಸೂಕ್ತ ಭದ್ರತೆ ಹಾಗೂ ಅಗತ್ಯ ಮಾಹಿತಿಗಳ ಪೂರೈಕೆಗಾಗಿ ನಿಯೋಜಿಸಲಾಗಿದೆ.
2015ರಲ್ಲಿ ಪ್ರಾರಂಭವಾದ ಈ ಯೋಜನೆಯುಡಿ ಗೃಹ ರಕ್ಷಕದಳದ ಅರ್ಹ ಸಿಬ್ಬಂದಿಯನ್ನು ಈ ಯೋಜನೆಯಡಿ ಆಯ್ಕೆ ಮಾಡಿ ಒಂದು ತಿಂಗಳುಗಳ ಕಾಲ ಪ್ರವಾಸಿತಾಣಗಳ ಕುರಿತು, ಪ್ರವಾಸಿಗರೊಂದಿಗಿನ ಸೌಜನ್ಯ ದಿಂದ ವರ್ತಿಸುವದರಿಂದ ಹಿಡಿದು, ಪೊಲೀಸ ನಿಯಮಾವಳಿಗಳಾದಿಯಾಗಿ ವಿಶೇಷ ತರಬೇತಿ ನೀಡಲಾಗಿರುತ್ತದೆ.
ಪ್ರವಾಸಿ ಮಿತ್ರರಿಗೆ ವಿಶೇಷವಾದ ಸಮವಸ್ತ್ರವನ್ನು ಪ್ರವಾಸೋದ್ಯಮ ಇಲಾಖೆಯು ನಿಗದಿ ಪಡಿಸಿರುವದರಿಂದ ಇವರನ್ನು ಪ್ರವಾಸಿತಾಣಗಳಲ್ಲಿ ಗುರುತಿಸಲು ಸಹಕಾರಿಯಾಗಿದೆ,
ಇಂದು 40 ಪ್ರವಾಸಿ ಮಿತ್ರರಿಗೆ ಪ್ರವಾಸೋದ್ಯಮ ಇಲಾಖೆಯ ಅನುದಾನದಿಂದ ನೂತನ ಸಮವಸ್ತ್ರಗಳನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಇಂದು ಕಲಬುರಗಿ ಯಲ್ಲಿ ವಿತರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು