10:53 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್‌ ವಾರ್ಡನ್‌ ಮುಖ್ಯಸ್ಥ ಜೋ ಗೊನ್ಸಾಲ್ವಿಸ್‌ ಇನ್ನಿಲ್ಲ

29/08/2021, 21:40

ಮಂಗಳೂರು (reporterkarnataka.com):

ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್‌‌‌ ವಾರ್ಡನ್‌‌ ಜೋ ಗೊನ್ಸಾಲ್ವಿಸ್‌ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

1921ರಂದು ಜನಿಸಿದ್ದ ಗೊಲ್ಸಾಲ್ವಿಸ್‌ ಅವರು 
ಅವರು 100ನೇ ವಸಂತಕ್ಕೆ ಕಾಲಿಡಲು ಕೇವಲ 4 ತಿಂಗಳು ಮಾತ್ರ ಬಾಕಿ ಉಳಿದಿತ್ತು. ಜನವರಿ 1 ಅವರ ಹುಟ್ಟಿದ ದಿನವಾಗಿತ್ತು.

ಫಳ್ನೀರ್‌ ನಿವಾಸಿಯಾಗಿರುವ ಜೋ ಗೊಲ್ಸಾಲ್ವಿಸ್‌ ಅವರು ಬ್ರಿಟಿಷ್‌‌ ಸಂಸ್ಥೆ ಜೆ.ಎಲ್‌ ಮೋರಿಸನ್‌‌ನಲ್ಲಿ
ಮ್ಯಾನೇಜ್‌ಮೆಂಟ್‌‌ ಟ್ರೈನಿಯಾಗಿ ಸೇರ್ಪಡೆಗೊಂಡಿದ್ದರು. ನಂತರ ಅವರು ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಲಂಡನ್‌ ಇನ್‌ಸ್ಟಿಟ್ಯೂಟ್‌‌‌ ಆಫ್‌‌ ಮಾರ್ಕೆಟಿಂಗ್‌‌ನಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯ ಚುನಾಯಿತ ಸದಸ್ಯರೂ ಆಗಿದ್ದರು. ನಿವೃತ್ತಿಯ ಬಳಿಕ ಜೋ ಅವರು ಶಿಕ್ಷಣ ಸಂಸ್ಥೆಗಳು ಹಾಗೂ ದತ್ತಿ ಸಂಸ್ಥೆಗಳ ನಿರ್ದೇಶಕ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು.

ಉತ್ತರ ಅಮೆರಿಕದ ಸೈಂಟ್ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಸಂಘದ ಸ್ಥಾಪಕ ನಿರ್ದೇಶಕರಾಗಿದ್ದರು. 
ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪೊಲೀಸ್ ಇಲಾಖೆ ಜತೆ ಕೈಜೋಡಿಸಿದ್ದರು.

ಟ್ರಾಫಿಕ್‌ ವಿಭಾಗದ ನೆರವಿನೊಂದಿಗೆ 2015 ರಲ್ಲಿ 94 ನೇ ವಯಸ್ಸಿನಲ್ಲಿ ಟ್ರಾಫಿಕ್ ವಾರ್ಡನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಸುರಕ್ಷಿತ ಚಾಲನೆ ಸೇರಿದಂತೆ ಇತರ ಪ್ರಮುಖ ವಿಚಾರಗಳ ಬಗ್ಗೆ ಯುವಜನರೊಂದಿಗೆ ಅವರು ಸಂವಾದ ನಡೆಸುತ್ತಿದ್ದರು. ಅವರ ಸೇವೆ ಹಾಗೂ ಕೊಡುಗೆಗಾಗಿ ಟ್ರಾಫಿಕ್‌ ವಿಭಾಗ ಅವರನ್ನು ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು