5:30 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Tragady | ದೆಹಲಿ: ಕುಂಭಮೇಳಕ್ಕೆ ಹೊರಟಿದ್ದ ಭಕ್ತಸಮೂಹದ ನಡುವೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಕನಿಷ್ಠ 18 ಮಂದಿ ಸಾವು

16/02/2025, 09:46

ನವದೆಹಲಿ(reporterkarnataka.com): ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ಮತ್ತೊಂದು ಕಾಲ್ತುಳಿತ ಸಂಭವಿಸಿದೆ. ಆದರೆ ಈ ದುರಂತ ನಡೆದದ್ದು ದೆಹಲಿಯಲ್ಲಿ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ಹೊರಟ ಭಕ್ತಸಮೂಹದ ನಡುವೆ ರೈಲಿಗಾಗಿ ನಡೆದ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 18 ಮಂದಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರಲ್ಲಿ 14 ಮಂದಿ ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ದೆಹಲಿಯ ಕೇಂದ್ರ ರೈಲ್ವೆ ನಿಲ್ದಾಣದ 14 ಮತ್ತು 15ನೇ ಫ್ಲಾಟ್ ಫಾರ್ಮ್ ನಲ್ಲಿ ಈ ಘೋರ ದುರಂತ ಸಂಭವಿಸಿದೆ. ಕಿಕ್ಕಿರಿದು ಸೇರಿದ್ದ ಜನರು ರೈಲು ಹತ್ತಲು ನೂಕು ನುಗ್ಗಲು ನಡೆಸಿರುವುದರಿಂದ ಕಾಲ್ತುಳಿತ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು