12:06 PM Monday20 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ…

ಇತ್ತೀಚಿನ ಸುದ್ದಿ

ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಗೂಡ್ಸ್ ರೈಲು: ಕನಿಷ್ಠ 9 ಮಂದಿ ಸಾವು; 40ಕ್ಕೂ ಅಧಿಕ ಮಂದಿಗೆ ಗಾಯ

17/06/2024, 21:21

ನ್ಯೂಜಲ್ಪೈಗುರಿ(reporterkarnataka.com): ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಗೂಡ್ಸ್ ರೈಲೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಹಿಂದಿನ 3 ಕೋಚ್‌ಗಳು ಹಳಿತಪ್ಪಿ ಕನಿಷ್ಠ 9 ಪ್ರಯಾಣಿಕರು ಸಾವನ್ನಪ್ಪಿದ್ದು, ಇತರ 41 ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ಬೆಳಗ್ಗೆ ಡಾರ್ಜಿಲಿಂಗ್‌ನಲ್ಲಿ ಅಸ್ಸಾಂನ ಸಿಲ್ಚಾರ್‌ನಿಂದ ಪಶ್ಚಿಮ ಬಂಗಾಳದ ಸೀಲ್ದಾಹ್‌ಗೆ ಪ್ರಯಾಣಿಸುತ್ತಿದ್ದ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆತು. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಜನರು ಸ್ಥಳದಲ್ಲಿ ಜಮಾಯಿಸಿದರು.

ರೈಲಿನೊಳಗೆ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯ ಭರದಿಂದ ನಡೆಯಿತು.
ಅಪಘಾತವು ಬೆಳಿಗ್ಗೆ 8:30 ರ ಸುಮಾರಿಗೆ ಸಂಭವಿಸಿದೆ ಮತ್ತು ಉತ್ತರ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಸುಮಾರು 11 ಕಿಮೀ ದೂರದಲ್ಲಿ ನಡೆದಿದೆ. ಪೂರ್ವ ಮತ್ತು ಈಶಾನ್ಯ ಭಾರತದ ಈಶಾನ್ಯ ಫ್ರಾಂಟಿಯರ್ ರೈಲ್ವೇ ವಲಯದಲ್ಲಿನ ಅತಿದೊಡ್ಡ ಮತ್ತು ಜನನಿಬಿಡ ನಿಲ್ದಾಣಗಳಲ್ಲಿ ಇದು ಒಂದಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂಎನ್‌ಆರ್‌ಎಫ್‌ನಿಂದ 10 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಪ್ರತಿ ಮೃತರ ಮುಂದಿನ ಕುಟುಂಬಕ್ಕೆ ₹ 2.5 ಲಕ್ಷ ಮತ್ತು ಸಣ್ಣ ಗಾಯಗಳಿಗೆ ₹ 50,000 ಪರಿಹಾರ ಘೋಷಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು