6:42 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ

06/11/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಖಾನೆಯಿಂದ ಕಬ್ಬು ಖಾಲಿ ಮಾಡಿ ಅನಂತಪುರ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದಿನ ಟ್ರೇಲರ್ ಜೋಡನೆ ಪಿನ್ ಸ್ಲಿಪ್ಆಗಿ ಟ್ರೇಲರ್ ಪಲ್ಟಿ ಆಗಿದೆ. ಟ್ರೇಲರ್ ಪಕ್ಕದಲ್ಲೆ ತಾಂವಶಿ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನ ಮೇಲೆ ಟ್ರೇಲರ್ ಪಲ್ಟಿಯಾಗಿದೆ.


ದ್ವಿಚಕ್ರ ವಾಹನದ ಮೇಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಮಧಭಾವಿ ಗ್ರಾಮದ ಸಚಿನ ರಾಯಪ್ಪ ನಿವಲಗಿ (25) ಮೃತಪಟ್ಟ ದುರ್ದೈವಿ.

ಅಪಘಾತ ಸಂಭವಿಸಿದ ಸ್ಥಳದಿಂದ ಸ್ಥಳೀಯರು 108 ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಸರ್ಕಾರಿ 108 ತುರ್ತು ಸೇವೆ ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ತಲುಪಲು ಒಂದು ತಾಸಿಗೂ ಹೆಚ್ಚು ಸಮಯ ತಗೆದುಕೊಂಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮ ಜತೆ ಮಾತನಾಡಿದ ಸ್ಥಳೀಯರು ಸಂಪೂರ್ಣ ಹದಗೆಟ್ಟು ಹೋಗಿರುವ ರಸ್ತೆ ಹಾಗೂ ಅತಿ ವೇಗದಲ್ಲಿ ಚಲಿಸುತ್ತಿರುವ ಕಬ್ಬಿಣ ಟ್ರ್ಯಾಕ್ಟರಗಳು ತಗ್ಗು ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳು ಅಮಾಯಕರನ್ನು ಬಲಿ ಪಡೆಯುತ್ತಿವೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು