11:43 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ

06/11/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಖಾನೆಯಿಂದ ಕಬ್ಬು ಖಾಲಿ ಮಾಡಿ ಅನಂತಪುರ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದಿನ ಟ್ರೇಲರ್ ಜೋಡನೆ ಪಿನ್ ಸ್ಲಿಪ್ಆಗಿ ಟ್ರೇಲರ್ ಪಲ್ಟಿ ಆಗಿದೆ. ಟ್ರೇಲರ್ ಪಕ್ಕದಲ್ಲೆ ತಾಂವಶಿ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನ ಮೇಲೆ ಟ್ರೇಲರ್ ಪಲ್ಟಿಯಾಗಿದೆ.


ದ್ವಿಚಕ್ರ ವಾಹನದ ಮೇಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಮಧಭಾವಿ ಗ್ರಾಮದ ಸಚಿನ ರಾಯಪ್ಪ ನಿವಲಗಿ (25) ಮೃತಪಟ್ಟ ದುರ್ದೈವಿ.

ಅಪಘಾತ ಸಂಭವಿಸಿದ ಸ್ಥಳದಿಂದ ಸ್ಥಳೀಯರು 108 ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಸರ್ಕಾರಿ 108 ತುರ್ತು ಸೇವೆ ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ತಲುಪಲು ಒಂದು ತಾಸಿಗೂ ಹೆಚ್ಚು ಸಮಯ ತಗೆದುಕೊಂಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮ ಜತೆ ಮಾತನಾಡಿದ ಸ್ಥಳೀಯರು ಸಂಪೂರ್ಣ ಹದಗೆಟ್ಟು ಹೋಗಿರುವ ರಸ್ತೆ ಹಾಗೂ ಅತಿ ವೇಗದಲ್ಲಿ ಚಲಿಸುತ್ತಿರುವ ಕಬ್ಬಿಣ ಟ್ರ್ಯಾಕ್ಟರಗಳು ತಗ್ಗು ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳು ಅಮಾಯಕರನ್ನು ಬಲಿ ಪಡೆಯುತ್ತಿವೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು