3:42 PM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ

06/11/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಖಾನೆಯಿಂದ ಕಬ್ಬು ಖಾಲಿ ಮಾಡಿ ಅನಂತಪುರ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದಿನ ಟ್ರೇಲರ್ ಜೋಡನೆ ಪಿನ್ ಸ್ಲಿಪ್ಆಗಿ ಟ್ರೇಲರ್ ಪಲ್ಟಿ ಆಗಿದೆ. ಟ್ರೇಲರ್ ಪಕ್ಕದಲ್ಲೆ ತಾಂವಶಿ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನ ಮೇಲೆ ಟ್ರೇಲರ್ ಪಲ್ಟಿಯಾಗಿದೆ.


ದ್ವಿಚಕ್ರ ವಾಹನದ ಮೇಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಮಧಭಾವಿ ಗ್ರಾಮದ ಸಚಿನ ರಾಯಪ್ಪ ನಿವಲಗಿ (25) ಮೃತಪಟ್ಟ ದುರ್ದೈವಿ.

ಅಪಘಾತ ಸಂಭವಿಸಿದ ಸ್ಥಳದಿಂದ ಸ್ಥಳೀಯರು 108 ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಸರ್ಕಾರಿ 108 ತುರ್ತು ಸೇವೆ ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ತಲುಪಲು ಒಂದು ತಾಸಿಗೂ ಹೆಚ್ಚು ಸಮಯ ತಗೆದುಕೊಂಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮ ಜತೆ ಮಾತನಾಡಿದ ಸ್ಥಳೀಯರು ಸಂಪೂರ್ಣ ಹದಗೆಟ್ಟು ಹೋಗಿರುವ ರಸ್ತೆ ಹಾಗೂ ಅತಿ ವೇಗದಲ್ಲಿ ಚಲಿಸುತ್ತಿರುವ ಕಬ್ಬಿಣ ಟ್ರ್ಯಾಕ್ಟರಗಳು ತಗ್ಗು ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳು ಅಮಾಯಕರನ್ನು ಬಲಿ ಪಡೆಯುತ್ತಿವೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು